ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

ಬಾಗಲಕೋಟೆ: ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಕಾಂಗ್ರೆಸ್ ನಾಯಕರಾಗಿ ಬಿಜೆಪಿಯವರ ಜೊತೆ ಊಟ ಮಾಡಿ ಪಕ್ಷದ ಮರ್ಯಾದೆ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.

ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ತಂಡವೊಂದು ಜಿಲ್ಲೆಗೆ ಬಂದಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ನಾಯಕರ ಜೊತೆ ಊಟ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿದ್ದರೂ ಎಲ್ಲರನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಜೊತೆ ಊಟ ಮಾಡಿದ್ದಾರೆ. ಇದು ಪಕ್ಷಕ್ಕೆ ಮಾಡಿದ ಅವಮಾನ. ಪಕ್ಷದ ಹಿರಿಯ ನಾಯಕನಾಗಿ ಬಿಜೆಪಿ ಜೊತೆ ಹೋಗಿದ್ದು ತಪ್ಪು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತು ಸಚಿವರು ಬರ ಅಧ್ಯಯನವನ್ನು ವೀಕ್ಷಿಸಿದ್ದಾರೆ. ಇದು ಕಾಟಾಚಾರದ ಬರ ಅಧ್ಯಯನ ಎಂದು ಜಿ.ಪಂ ಕಾಂಗ್ರೆಸ್ ಸದಸ್ಯ ಹಾಗೂ ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್ ವಿ ದೇಶಪಾಂಡೆ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಗಣನೆಗೆ ತೆಗೆದುಕೊಂಡಿಲ್ಲ. ಜೊತೆಗೆ ಪ್ರತಿಪಕ್ಷ ಬಿಜೆಪಿ ಕಚೇರಿಯಲ್ಲಿ ಊಟ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *