ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು: ಸೊರಕೆ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ಅದಕ್ಕೆ ಇಡಿ ಬಿಟ್ಟು ಕಾಂಗ್ರೆಸ್ಸನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಗ್ನಿಪಥ್ ಜಾರಿಯಿಂದ ದೇಶದ ಸೈನಿಕರ ಆತ್ಮಸ್ಥೈರ್ಯ ಕುಗ್ಗುತ್ತೆ: ಧೃವನಾರಾಯಣ್

ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲಾ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.

Live Tv

Comments

Leave a Reply

Your email address will not be published. Required fields are marked *