ಸಿದ್ದರಾಮಯ್ಯ ಆಪ್ತನ ನಡೆಯಿಂದ ಕಾಂಗ್ರೆಸ್ ಮುಖಂಡರಲ್ಲಿ ಆತಂಕ!

ಬೆಳಗಾವಿ: ಕಾಂಗ್ರೆಸ್ ಮುಖಂಡ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ನಿಗೂಢ ನಡೆಯಿಂದ ಇದೀಗ ಪಕ್ಷದ ಮುಖಂಡರಲ್ಲಿ ಆತಂಕ ಮೂಡಿದೆ.

ತಾನು ತೆರಳದೆ ತನ್ನ ಬೆಂಬಲಿಗ ಶಾಸಕರಿಗೂ ಬೆಂಗಳೂರಿಗೆ ತೆರಳದಂತೆ ಸೂಚನೆ ನಿಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

ಅಥಣಿ ಕಾಂಗ್ರೆಸ್ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಗೂ ಬೆಂಗಳೂರಿಗೆ ತೆರಳದಂತೆ ರಮೇಶ್ ಸೂಚನೆ ನೀಡಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಲು ರಮೇಶ ಜಾರಕಿಹೊಳಿ ಆದೇಶಕ್ಕೆ ಶ್ರೀಮಂತ ಪಾಟೀಲ ಹಾಗೂ ಮಹೇಶ ಕುಮಟಳ್ಳಿ ಕಾದು ಕುಳಿತಿದ್ದಾರೆ ಎನ್ನಲಾಗಿದೆ.

ಇಬ್ಬರೂ ಅಭ್ಯರ್ಥಿಗಳ ಆಯ್ಕೆಗಾಗಿ ಹಗಲಿರುಳು ಶ್ರಮ ವಹಿಸಿದ್ದ ರಮೇಶ ಜಾರಕಿಹೊಳಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಅವರು ನಿಗೂಢ ನಡೆಯಿಂದಾಗಿ ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಆತಂಕ ಮೂಡಿದೆ ಎಂಬುದಾಗಿ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *