ಶಾಸಕ ಜಮೀರ್ ಅಹ್ಮದ್‌ಗೆ ಲಘು ಹೃದಯಾಘಾತ

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸದ್ಯ ಶಾಸಕರಿಗೆ ವೈದ್ಯರು ಸ್ಟೆಂಟ್ ಅಳವಡಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಜಮೀರ್ ಗುರುತಿಸಿಕೊಂಡಿಸಿದ್ದಾರೆ. ಇತ್ತೀಚೆಗೆ ಐಎಂಎ ಜ್ಯುವೆಲ್ಸ್ ವಂಚನೆ ಕೇಸ್ ನಲ್ಲಿ ಜಮೀರ್ ಅವರ ಹೆಸರು ಕೇಳಿಬಂದಿತ್ತು.

Comments

Leave a Reply

Your email address will not be published. Required fields are marked *