ಮುನಿರತ್ನ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ರಾ ಡಿಕೆಶಿ?

ಬೆಂಗಳೂರು: ರಾಜರಾಜೇಶ್ವರಿ ಶಾಸಕ ಮುನಿರತ್ನ ಅವರ ರಾಜೀನಾಮೆ ಪತ್ರವನ್ನು ಸಚಿವ ಡಿ.ಕೆ.ಶಿವಕುಮಾರ್ ಹರಿದು ಹಾಕಿದ್ದಾರಾ ಎಂಬ ಪ್ರಶ್ನೆ ಭಾರೀ ಚರ್ಚೆಯಾಗುತ್ತಿದೆ.

ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಗೆ ಒಟ್ಟು 12 ಜನ ಅತೃಪ್ತ ಶಾಸಕರು ರಾಜೀನಾಮೆ ನೀಡಲು ತೆರಳಿದ್ದರು. ರಾಜೀನಾಮೆ ನೀಡುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಪೀಕರ್ ಕಚೇರಿಯನ್ನು ಡಿಕೆ ಶಿವಕುಮಾರ್ ಪ್ರವೇಶಿಸಿದ್ದಾರೆ. ಈ ವೇಳೆ ಮುನಿರತ್ನ ಅವರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದಾರೆ ಎನ್ನಲಾಗಿದೆ.

ಶಾಸಕರು ರಾಜೀನಾಮೆ ನೀಡಿದ ಬಳಿಕ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಕಾರಿನಲ್ಲಿ ಶಾಸಕರಾದ ಮುನಿರತ್ನ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್ ಹಾಗೂ ರಾಮಲಿಂಗಾ ರೆಡ್ಡಿ ಅವರನ್ನು ನಿವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಮುನಿರತ್ನ ಅವರ ರಾಜೀನಾಮೆಯನ್ನು ತಪ್ಪಿಸಿರುವ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು, ಉಳಿದ ಮೂವರು ಶಾಸಕರ ಮನವೊಲಿಸಿ ರಾಜೀನಾಮೆಯನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿದವರು ಯಾರ‍್ಯಾರು?:
ಗೋಕಾಕ್‍ನ ಶಾಸಕ ರಮೇಶ್ ಜಾರಕಿಹೊಳಿ, ಹೀರೆಕೆರೂರಿನ ಬಿ.ಸಿ.ಪಾಟೀಲ್, ಮಸ್ಕಿಯ ಪ್ರತಾಪ್‍ಗೌಡ ಪಾಟೀಲ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಅಥಣಿಯ ಮಹೇಶ್ ಕುಮಕಟಳ್ಳಿ, ಕೆ.ಆರ್.ಪೇಟೆಯ ನಾರಾಯಣಗೌಡ, ಜೆಡಿಎಸ್‍ನ ಗೋಪಾಲಯ್ಯ, ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ, ಯಶವಂತಪುರದ ಎಸ್.ಟಿ.ಸೋಮಶೇಖರ್ ಹಾಗೂ ಭೈರತಿ ಬಸವರಾಜು ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಮಾಜಿ ಅಧ್ಯಕ್ಷ ಹುಣಸೂರು ಶಾಸಕ ವಿಶ್ವನಾಥ್, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ರಾಜೀನಾಮೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *