ಸಂತೋಷ್ ಪಾಟೀಲ್ ಕುಟುಂಬಕ್ಕೆ 5 ಲಕ್ಷ ರೂ. ನೀಡುವ ಭರವಸೆ ಕೊಟ್ಟ ಕಾಂಗ್ರೆಸ್ ಶಾಸಕ

ಚಿಕ್ಕೋಡಿ: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸದಲಗಾ ಚಿಕ್ಕೋಡಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಆಶಯ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳೀಯ ಶಾಸಕ ಗಣೇಶ್ ಹುಕ್ಕೇರಿ ವತಿಯಿಂದ 5 ಲಕ್ಷ ರೂ. ನೆರವು ನೀಡಲಾಗುವುದು ಎಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ತಿಳಿಸಿದರು.

ಚಿಕ್ಕೋಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತ ಪಾವತಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ- ಸಮಾಜ ಘಾತುಕ ಕೆಲಸ ಮಾಡಿಲ್ಲ: ಅಲ್ತಾಫ್

ಜೊತೆಗೆ ವೈಯಕ್ತಿಕವಾಗಿ ಸಂತೋಷ್ ಪಾಟೀಲ್ ಪುತ್ರನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ಹಣ ನೀಡುತ್ತೇವೆ. ಈ ಹಣವನ್ನು ಮೃತನ ಮಗನಿಗೆ 18 ವರ್ಷವಾಗುವವರೆಗೆ ತಾಯಿ ಹಾಗೂ ಮಗನ ಹೆಸರಿನಲ್ಲಿ ಬ್ಯಾಂಕ್‍ನಲ್ಲಿ ಇಡಲಾಗುವುದು ಎಂದು ಹೇಳಿದರು.

Comments

Leave a Reply

Your email address will not be published. Required fields are marked *