ಕಾಂಗ್ರೆಸ್ ಎಂಎಲ್‍ಎ ಮಗ ಆತ್ಮಹತ್ಯೆಗೆ ಶರಣು

ಭೋಪಾಲ್: ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಎಂಎಲ್‍ಎ(MLA) ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ವೈಭವ್(16) ಮೃತನಾಗಿದ್ದನೆ. ರಿವಾಲ್ವರ್​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಕಾಂಗ್ರೆಸ್ ಎಂಎಲ್‍ಎ(MLA) ಸಂಜಯ್ ಯಾದವ್ ಮಗನಾಗಿದ್ದಾನೆ. ಆತ ಪಿಯುಸಿ ಓದುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

ತಲೆಗೆ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿದ್ದ ವೈಭವ್‍ನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಕೆಲವೇ ಕ್ಷಣಗಳಲ್ಲಿ ವೈಭವ್ ಕೊನೆಯ ಕೊನೆಯುಸಿರೆಳೆದಿದ್ದಾನೆ. ಆತ ವಾಷ್‍ರೂಮ್‍ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್

ಜಬಲ್‍ಪುರ್ ಎಸ್‍ಪಿ ಸಿದ್ಧಾರ್ಥ್ ಬಹುಗುಣ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಖಚಿತಪಡಿಸಿದ್ದು, ಯಾವ ಕಾರಣಕ್ಕೆ ಎಂಬುದನ್ನು ವಿಚಾರಣೆ ಮಾಡುತ್ತಿದ್ದೇವೆ. ಪತ್ರ ದೊರೆಕಿದ್ದು, ಅದರಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ವೈಭವ್ ಬರೆದುಕೊಂಡಿದ್ದಾನೆ. ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *