ಕೈ ಶಾಸಕರು ಸಿದ್ದರಾಮಯ್ಯನವರನ್ನು ಹೊಗಳಿದರೆ ತಪ್ಪೇನು: ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಹೊಗಳಿದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಶಾಸಕರು ಹೊಗಳಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು. ಹೀಗಾಗಿ ಅವರನ್ನು ಹೊಗಳಿರಬಹುದು. ಸಿದ್ದರಾಮಯ್ಯ ಐದು ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಅವರನ್ನು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರ ರಚನೆಯಾಗಿ 7 ತಿಂಗಳು ಆಗಿದ್ದರೂ ಒಂದೇ ಒಂದು ಕೆಲಸ ಆಗಿಲ್ಲ ಎಂದು ಯಶವಂತಪುರದ ಶಾಸಕ ಸೋಮಶೇಖರ್ ಹೇಳಿಕೆಗೆ ಟಾಂಗ್ ಕೊಟ್ಟ ಅವರು, ಸೋಮಶೇಖರ್ ರವರಿಗೆ ಸರಿಯಾದ ಮಾಹಿತಿ ಇಲ್ಲ ಎಂದು ಕಾಣುತ್ತದೆ. ಅವರಿಗೆ ಸರಿಯಾದ ಮಾಹಿತಿ ನೀಡಿ ಸರಿ ಮಾಡುತ್ತೇವೆ. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಅನೇಕ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.

ಬೆಂಗಳೂರು ಬಗ್ಗೆ ಇಲ್ಲಿನ ಇತಿಹಾಸದ ಬಗ್ಗೆ, ಅಭಿವೃದ್ಧಿ ಬಗ್ಗೆ ಸಿಎಂ ಅವರು ಮಾತನಾಡುತ್ತಾರೆ. ಆದರೆ ಯಾವುದನ್ನು ಸಿಎಂ ಕುಮಾರಸ್ವಾಮಿ ಮಾಡಿಲ್ಲ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಯಾವುದೇ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಅವನ್ನೆಲ್ಲ ನಾವು ಹೇಳಲು ಹೋದರೆ ಬೇರೆ ಬೇರೆ ಅರ್ಥ ಪಡೆದುಕೊಳ್ಳುತ್ತದೆ. ಯಾವ ವ್ಯವಸ್ಥೆಯನ್ನು ಜನರಿಗೆ ನೀಡಲು ಸಿಎಂ ಅವರಿಗೆ ಸಾಧ್ಯವಾಗಿಲ್ಲ ಎಂದು ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಎಸ್.ಟಿ ಸೋಮಶೇಖರ್ ಹೇಳಿಕೆ ನೀಡಿದ್ದರು.

ಈ ಕಾರ್ಯಕ್ರಮದಲ್ಲಿ ಎಂ.ಟಿ.ಬಿ ನಾಗರಾಜ್ ಮಾತನಾಡಿ, ಆಂಜನೇಯನ ಎದೆ ಬಗಿದರೆ ಹೇಗೆ ರಾಮ ಕಾಣುತ್ತಾನೋ ಹಾಗೆಯೇ ನನ್ನ ಎದೆ ಬಗಿದರೆ ಸಿದ್ದರಾಮಯ್ಯನವರೇ ಕಾಣುತ್ತಾರೆ. ನಾನು ಯಾವತ್ತೂ ಸಿದ್ದರಾಮಯ್ಯನವರ ಜಪ ಮಾಡುತ್ತೇನೆ ಎಂದಿದ್ದರು.

https://www.youtube.com/watch?v=OflAzK4wALY

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *