ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಲ್ವಾರಿನಿಂದ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ ಇದೀಗ ವಿವಾದಕ್ಕೀಡಾಗಿದ್ದಾರೆ..
ಈ ಘಟನೆ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಇಸ್ಲಾಂಪುರದಲ್ಲಿ ನಡೆದಿದೆ. ಅಮೀರಾ ದೇಸಾಯಿ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಕಾಂಗ್ರೆಸ್ ಕಾರ್ಯಕರ್ತೆ.

ಅಮೀರಾ ಹುಟ್ಟುಹಬ್ಬವಿದ್ದ ಕಾರಣ ಶುಕ್ರವಾರ ರಾತ್ರಿ ತಲ್ವಾರ್ ಮುಖಾಂತರ ಕೇಕ್ ಕಟ್ ಮಾಡಿ ತಮ್ಮ ಕಾರ್ಯಕರ್ತರೊಂದಿಗೆ ಬರ್ತ್ ಡೇ ಆಚರಣೆ ಮಾಡಿದ್ದಾರೆ. ಇದೀಗ ಕಾರ್ಯಕರ್ತೆಯ ಹುಟ್ಟುಹಬ್ಬ ಆಚರಣೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯಮಕನಮರಡಿ ಫೋಲೀಸ್ ಠಾಣಾ ವ್ಯಾಪ್ಯಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply