ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಸಚಿವ ಯಶಪಾಲ್ ಆರ್ಯ, ಶಾಸಕ ಸಂಜೀವ್ ಆರ್ಯ

ಡೆಹ್ರಾಡೂನ್: ಉತ್ತರಾಖಂಡದ ಸಾರಿಗೆ ಸಚಿವರಾಗಿದ್ದ ಬಿಜೆಪಿ ನಾಯಕ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಸಂಜೀವ್ ಆರ್ಯ ಸೋಮವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಯಶಪಾಲ್ ಆರ್ಯ ಅವರು ಉತ್ತರಾಖಂಡದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರೆ, ಅವರ ಮಗ ಸಂಜೀವ್ ನೈನಿತಾಲ್ ಶಾಸಕರಾಗಿದ್ದರು. ದೆಹಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಹರೀಶ್ ರಾವತ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಅವರ ಸಮ್ಮುಖದಲಿ ಯಶಪಾಲ್ ಆರ್ಯ ಹಾಗೂ ಸಂಜೀವ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇದನ್ನೂ ಓದಿ: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಯಶ್‍ಪಾಲ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಯಿತು. ಅವರು ಉತ್ತರಾಖಂಡದ ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಣದೀಪ್ ಸುರ್ಜೆವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 55ರ ಮಹಿಳೆ ಮೇಲೆ ಗ್ಯಾಂಗ್ ರೇಪ್

ಇದೇ ವೇಳೆ ಕೆ.ಸಿ ವೇಣು ಗೋಪಾಲ್ ಅವರು ಈ ಮುನ್ನ 2007 ರಿಂದ 2014ರವರೆಗೆ ಪಿಸಿಸಿ ಮುಖ್ಯಸ್ಥರಾಗಿದ್ದ ಯಶಪಾಲ್ ಆರ್ಯ ನಮ್ಮ ಮನೆಗೆ ಆಗಮಿಸುತ್ತಿದ್ದಾರೆ ಎಂದು ನುಡಿದಿದ್ದಾರೆ.

Comments

Leave a Reply

Your email address will not be published. Required fields are marked *