ಕಲುಷಿತ ನೀರು ಕುಡಿದು ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಜಿಟಿಡಿ

ಮೈಸೂರು: ಜಿಲ್ಲೆಯ ಮೈಸೂರಿನ ಕಡಕೊಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 119 ಮಂದಿ ಅಸ್ವಸ್ಥರಾಗಿದ್ದವರ ಆರೋಗ್ಯವನ್ನು ಶಾಸಕ ಜಿ.ಟಿ ದೇವೇಗೌಡ ವಿಚಾರಿಸಿದರು.

ಕಡಕೊಳ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿಸಿ ನಂತರ, ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿರುವ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿ, ಅಸ್ವಸ್ಥ ಗೊಂಡವರಿಗೆ ಧೈರ್ಯ ತುಂಬಿದರು. ಅಲ್ಲದೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಕಡಕೊಳ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು. ಅಲ್ಲದೆ ಸ್ಥಳೀಯ ಜನರ ಆರೋಗ್ಯ ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗ ಸೂಚನೆ ನೀಡಿದರು. ಬೋರ್‍ವೆಲ್ ನೀರು ಸ್ಥಗಿತಗೊಳಿಸಿರುವ ಕಾರಣ ಪಂಚಾಯ್ತಿ ವತಿಯಿಂದ ಕುಡಿಯುವ ನೀರು ಸರಬರಾಜು ಮಾಡಲು ತುರ್ತಾಗಿ ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

Comments

Leave a Reply

Your email address will not be published. Required fields are marked *