ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿಗೆ ಕೊರೊನಾ ಪಾಸಿಟಿವ್

ರಾಮನಗರ: ಕಳೆದ ಎರಡು ದಿನದಿಂದ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿ ಜವರೇಗೌಡಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಶನಿವಾರ ಪಾದಯಾತ್ರೆ ನಡೆಸಬೇಡಿ ಎಂದು ಮನವಿ ಮಾಡಲು ಎಡಿಸಿ ಬಂದಿದ್ದರು. ನಿನ್ನೆ ಬೆಳಗ್ಗೆಯೂ ಕೊರೊನಾ ನಿಯಮ ಪಾಲಿಸಿ ಎಂದು ಹೇಳಿದ್ದರು. ಬಳಿಕ ಸಂಜೆ ಡಿಕೆಶಿ ಬಳಿ ಬಂದು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಕೂಡ ಹೇಳಿದ್ದರು. ಈ ವೇಳೆ ಎಡಿಸಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೈದಿದ್ದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

ಇತ್ತ ಪಾದಯಾತ್ರೆ ಬಳಿ ಹೋಗಿದ್ದ ಕಾರಣ ಎಡಿಸಿ ಇಂದು ಬೆಳಗ್ಗೆ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದ್ದು, ಸದ್ಯ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

Comments

Leave a Reply

Your email address will not be published. Required fields are marked *