ರಾಜ್ಯದಲ್ಲಿ ಹಾಲು ಉತ್ಪಾದನೆ ದಿಢೀರನೇ ಏರಿಕೆ

ಬೆಂಗಳೂರು: ಕೊರೊನಾ ವೈಸರ್ ನಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಷ್ಟ ಅನುಭವಿಸಿದ್ದಾರೆ. ಆದರೆ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ದಿಢೀರನೇ ಹಾಲು ಉತ್ಪಾದನೆ ಹೆಚ್ಚಳವಾಗಿದೆ.

ಒಂದು ತಿಂಗಳಲ್ಲಿ 2 ಲಕ್ಷ ಲೀಟರ್ ಹಾಲು ಉತ್ಪಾದನೆ ಜಾಸ್ತಿಯಾಗಿದೆ. ಕೊರೊನಾ ಲಾಕ್‍ಡೌನ್ ಇರುವುದರಿಂದ ರೈತರು ಹೈನುಗಾರಿಕೆಗೆ ಹೆಚ್ಚು ಮಹತ್ವ ನೀಡಿದ್ದಾರೆ. ಲಾಕ್‍ಡೌನ್ ಪರಿಣಾಮದಿಂದ ಬೇರೆ ಕ್ಷೇತ್ರದ ವ್ಯಾಪಾರ ವ್ಯವಹಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆ ಹೆಚ್ಚು ಒತ್ತು ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಲಾಕ್‍ಡೌನ್ ಆಗುವ ಮುನ್ನ ತಿಂಗಳಲ್ಲಿ 68 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು. ಆದರೆ ಲಾಕ್‍ಡೌನ್ ನಂತರ 70 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಈ ಮೂಲಕ ಒಂದು ತಿಂಗಳಲ್ಲಿ 2 ಲಕ್ಷ ಲೀಟರ್ ಹಾಲು ಉತ್ಪಾದನೆ ಜಾಸ್ತಿಯಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿದೆ. ಕೆಎಂಎಫ್‍ಗೆ ಹೆಚ್ಚುವರಿಯಾಗಿ 2 ಲಕ್ಷ ಲೀಟರ್ ಹಾಲು ಹರಿದು ಬರುತ್ತಿದೆ. ಲಾಕ್‍ಡೌನ್ ಮುನ್ನ ರಾಜ್ಯದಲ್ಲಿ ಹಾಲು ಉತ್ಪಾದನೆ ಕಡಿಮೆ ಆಗುತ್ತಿತ್ತು. ಆದರೆ ದಿಢೀರ್ ಹಾಲು ಉತ್ಪಾದನೆ ಹೆಚ್ಚಳದಿಂದ ಕೆಎಂಎಫ್‍ಗೆ ಹೆಚ್ಚಾಗಿ ಹಾಲು ಬರುತ್ತಿದೆ. ಲಾಕ್‍ಡೌನ್ ನಂತರ ರಾಜ್ಯದಲ್ಲಿ ಹಾಲು ಉತ್ಪಾದನೆ ಏರಿಕೆ ಕಂಡಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಮಾಹಿತಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *