ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಕನ್ನಡಮಯವಾದ ಶಿಕ್ಷಣ ಸ್ಥಾಯಿ ಸಮಿತಿ ಕೊಠಡಿ

ಬೆಂಗಳೂರು: ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಶಿಕ್ಷಣ ಸ್ಥಾಯಿ ಸಮಿತಿ ಕೊಠಡಿ ಈಗ ಕನ್ನಡಮಯವಾಗಿದೆ.

ಬಿಬಿಎಂಪಿ ಶಿಕ್ಷಣ ಸಮಿತಿಯಲ್ಲಿ ಮಾಜಿ ರೌಡಿ ಶೀಟರ್ ದರ್ಬಾರ್ ಎದ್ದು ಕಾಣುತ್ತಿತ್ತು. ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಸಾಹಿತಿಗಳಿಗೆ ಅವಮಾನ ಮಾಡಿ ಕಚೇರಿಯನ್ನು ಸಂಪೂರ್ಣ ಹಸಿರುಮಯ ಮಾಡಿಕೊಂಡಿದ್ದರು. ಈ ಬಗ್ಗೆ ಮಂಗಳವಾರ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಆದರೆ ಈಗ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಪೂರ್ಣ ಕವಿಗಳು, ಶಿಕ್ಷಣ ಕ್ಷೇತ್ರದ ಸಾಧಕರು ಹಾಗೂ ಸ್ವಾಮೀಜಿಗಳ ಫೋಟೋ ಹಾಕಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಕಚೇರಿ ಹಸಿರುಮಯ – ಗಣ್ಯರ ಫೋಟೋಗಳು ಮಾಯ

ಅಷ್ಟೇ ಅಲ್ಲದೇ ಸರ್ವಪಲ್ಲಿ ರಾಧಾಕೃಷ್ಣ, ಕುವೆಂಪು, ದ.ರಾ ಬೇಂದ್ರೆ, ಶಿವಕುಮಾರ ಸ್ವಾಮೀಜಿ ಸೇರಿದಂತೆ ಎಲ್ಲರ ಫೋಟೋಗಳನ್ನು ಮತ್ತೆ ಕಚೇರಿಯಲ್ಲಿ ಹಾಕಲಾಗಿದ್ದು, ಹಸಿರು ಮಾಯವಾಗಿದ್ದ ಕಚೇರಿ ಮತ್ತೆ ಮೊದಲ ರೂಪ ಪಡೆದಿದೆ. ಇತ್ತ ಶಿಷ್ಟಾಚಾರದಂತೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಕುಮಾರಸ್ವಾಮಿ ಫೋಟೋ ಸಹ ಹಾಕಲಾಗಿದೆ.

ಇಮ್ರಾನ್ ಪಾಷಾ ಮೇಲೆ ಹತ್ತಾರು ಕೇಸ್‍ಗಳಿದ್ದು, ಈಗ ಶಿಕ್ಷಣ ಸ್ಥಾಯಿ ಅಧ್ಯಕ್ಷರಾಗಿಯೂ ಅವಾಂತರ ಸೃಷ್ಟಿಸಿದ್ದರು. ಕಮಿಟಿ ಕಚೇರಿಯಲ್ಲಿದ್ದ ಕವಿಗಳು, ಸಾಹಿತಿಗಳ ಫೋಟೋಗಳಿಗೆ ಕೊಕ್ ಕೊಟ್ಟಿದ್ದು, ಕುವೆಂಪು, ದ.ರಾ.ಬೇಂದ್ರೆ, ಸರ್ವಪಲ್ಲಿ ರಾಧಾಕೃಷ್ಣನ್ ಫೋಟೋಗಳನ್ನು ತೆರವು ಮಾಡಿ ಶಿಕ್ಷಣ ಕಮಿಟಿಯಲ್ಲೇ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಅವಮಾನ ಮಾಡಲಾಗಿತ್ತು. ಕಮಿಟಿ ಕಚೇರಿಯಲ್ಲಿದ್ದ ಸಿದ್ದಗಂಗಾ ಶ್ರೀಗಳು, ಬಾಲಗಂಗಾಧರ ಸ್ವಾಮೀಜಿಯವರ ಭಾಚಿತ್ರವನ್ನು ತೆರವು ಮಾಡಿದ್ದರು. ಇತ್ತ ಸಿಎಂ, ಡಿಸಿಎಂ, ಪ್ರಧಾನಿ ಫೋಟೋ ಹಾಕದೇ ಉದ್ಧಟತನ ತೋರಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *