ಸಿಲಿಂಡರ್ ಸ್ಫೋಟ- 5 ತಿಂಗ್ಳ ಮಗ, ದಂಪತಿಗೆ ಗಂಭೀರ ಗಾಯ

ದಾವಣಗೆರೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಚಿಕ್ಕ ಮಗು ಸೇರಿದಂತೆ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಘಟನೆಯಲ್ಲಿ ವೀರೇಶ್, ಶಾರದಾ ಹಾಗೂ ಐದು ತಿಂಗಳ ಸಿದ್ದೇಶ್ ಗಾಯಗೊಂಡಿದ್ದಾರೆ. ಬಾಲಕ ಸಿದ್ದೇಶ್ ನ ಸ್ಥಿತಿ ಗಂಭೀರವಾಗಿದೆ. ಅವರನ್ನ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಳಗ್ಗೆ ಸಿಲಿಂಡರ್ ಲೀಕ್ ಅಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಹಂಚುಗಳೆಲ್ಲಾ ಕೆಳಕ್ಕೆ ಬಿದ್ದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *