ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

ಹೈದರಾಬಾದ್: ಇಪ್ಪತ್ತೆರಡು ದಿನಗಳ ಹುಸುಗೂಸೊಂದು ತನ್ನ ಅಪ್ಪ, ಅಮ್ಮನ ಜಗಳದಲ್ಲಿ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಸೈದಾಬಾದ್‍ನ ಪೂಸಲ ಬಸ್ತಿ ನಿವಾಸಿಗಳಾದ ಪಿ. ರಾಜೇಶ್ ಮತ್ತು ಜಾಹ್ನವಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ದಂಪತಿ ನಡುಗೆ ಶುರುವಾದ ಸಣ್ಣ ಜಗಳ ಮಗುವನ್ನು ಬಲಿ ಪಡೆದುಕೊಂಡಿದೆ. ಇದನ್ನೂ ಓದಿ: ಪೂಜಾ ಹೆಗ್ಡೆಗೆ ಸರ್ಪ್ರೈಸ್ ಕೊಟ್ಟ ಫೋಟೋಗ್ರಾಫರ್‌ಗಳು

ಇತ್ತೀಚೆಗಷ್ಟೆ ಈ ದಂಪತಿಗೆ ಮುದ್ದಾದ ಗಂಡು ಮಗು ಜನನವಾಗಿತ್ತು. ಮಗುವಿಗೆ ಹಾಲು ಕುಡಿಸುವ ಬಗ್ಗೆ ವಾಗ್ವಾದವಾದ ಹಿನ್ನಲೆಯಲ್ಲಿ ರಾಜೇಶ್ ಜಾಹ್ನವಿಗೆ ಹೊಡೆಯಲು ಪೈಪ್ ಕೈಗೆತ್ತಿಕೊಂಡ. ಮಗುವನ್ನು ತನ್ನ ತೋಳಿನಲ್ಲಿ ಎತ್ತಿಕೊಂಡಿದ್ದ ಆ ತಾಯಿ ಅದನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಳು. ಹೊಡೆತ ತಪ್ಪಿಸಿಕೊಳ್ಳಲು ಮನೆಯೆಲ್ಲಾ ಓಡಾಡಿದ್ದಳು ಎನ್ನಲಾಗಿದೆ. ಇದನ್ನೂ ಓದಿ:  ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

ಸ್ವಲ್ಪ ಸಮಯದ ನಂತರ ಮಗು ಯಾವುದೇ ಪ್ರತಿಕ್ರಿಯೆ ನೀಡದೆ ಇದ್ದದನ್ನು ಗಮನಿಸಿದ ದಂಪತಿ, ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷೆ ನಡೆಸಿದ ವೈದ್ಯರು, ಮಗು ಉಸಿರುಗಟ್ಟಿ ಸತ್ತುಹೋಗಿದೆ ಎಂದು ತಿಳಿಸಿದರು. ಮಾಹಿತಿ ತಿಳಿದ ಸೈದಾಬಾದ್ ಪೊಲೀಸರು ದಂಪತಿ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *