ಪಿಎಸ್‍ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್.ಡಿ. ಪಾಟೀಲ್, ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಲು ಮತ್ತೆ ನಿರಾಕರಿಸಿದೆ. ಇದರೊಂದಿಗೆ ನಾಲ್ವರಿಗೂ ಜೈಲೇ ಗತಿಯಾಗಿದೆ.

ಕಲಬುರಗಿ ಜಿಲ್ಲಾ 3ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ನ್ಯಾಯಾಲಯ ತೀರಸ್ಕರಿಸಿದೆ. ಬ್ಲೂಟೂತ್ ಡಿವೈಸ್ ಮೂಲಕ ಅಕ್ರಮದ ಮೂಲಕ ಅಭ್ಯರ್ಥಿಗಳು ತೇರ್ಗಡೆ ಆಗಲು ಸಹಕರಿಸುತ್ತಿದ್ದ ಆರೋಪಿ ಆರ್.ಡಿ ಪಾಟೀಲ್, ಎನ್.ವಿ. ಸುನೀಲ್, ತಮ್ಮ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಅಕ್ರಮ ನಡೆಸಲು ಸಹಕರಿಸಿದ ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ ಮತ್ತು ಇದೆ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

ಜಾಮೀನು ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಧೀಶ ಬಸವರಾಜ ನೇಸರಗಿ ಅವರ ನೇತೃತ್ವದ ಪೀಠ ತೀರಸ್ಕರಿಸಿದೆ. ಈ ಹಿಂದೆಯೂ ಆರೋಪಿಗಳು ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಆರೋಪಿಗಳಿಗೆ ಜಾಮೀನು ನೀಡದಂತೆ ಸಿಐಡಿ ತಕರಾರು ಅರ್ಜಿ ಈ ಹಿಂದೆ ಸಲ್ಲಿಸಿತ್ತು. ಇದನ್ನೂ ಓದಿ: ಬಾಂಗ್ಲಾ ಯುವತಿಯ ಮೇಲೆ ಬೆಂಗ್ಳೂರಿನಲ್ಲಿ ಗ್ಯಾಂಗ್‌ ರೇಪ್‌ – 7 ಮಂದಿಗೆ ಜೀವಾವಧಿ ಶಿಕ್ಷೆ

 

Comments

Leave a Reply

Your email address will not be published. Required fields are marked *