ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿ ಪರ ಬ್ಯಾಟ್ ಬೀಸಿದ ಯುವಿ

ಬೆಂಗಳೂರು: ಟೀಂ ಇಂಡಿಯಾ ಆಟಗಾರರ ಗಾಯದ ಸಮಸ್ಯೆ ಕುರಿತು ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಯ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಆರೋಪದ ವರದಿಗಳನ್ನು ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಅಲ್ಲಗೆಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯುವಿ, ನಾನು ಎನ್‍ಸಿಎ ಕುರಿತ ಅನುಭವನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಮಾರಕ ಕ್ಯಾನ್ಸರ್ ನಿಂದ ನಾನು ಹೊರ ಬರಲು ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿ ಸಹಕಾರ ನೀಡಿತ್ತು. ಬಿಸಿಸಿಐ ನಿರಂತರವಾಗಿ ಆಟಗಾರರ ಗಾಯದ ಸಮಸ್ಯೆಗಳನ್ನು ಬಹುಬೇಗ ನಿವಾರಿಸಲು ಕಾರ್ಯನಿರ್ವಹಿಸುತ್ತಿದ್ದು, ದೇಶದ ಉತ್ತಮ ತರಬೇತುದಾರರು ಹಾಗೂ ವೈದ್ಯರನ್ನು ನಿಯೋಜಿಸಿದೆ ಎಂದು ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಬಹು ನಿರೀಕ್ಷಿತ ಪ್ರವಾಸದ ವೇಳೆ ಟೀಂ ಇಂಡಿಯಾ ಪ್ರಮುಖ ವೇಗಿಗಳಾದ ಮಹಮ್ಮದ್ ಶಮಿ ಹಾಗೂ ಭುವನೇಶ್ವರ್ ಕುಮಾರ್ ಸಂಪೂರ್ಣ ಫಿಟ್ ಆಗದಿರುವ ಕಾರಣ ಈ ಚರ್ಚೆ ಆರಂಭವಾಗಿತ್ತು. ಶಮಿ ಮೊದಲು ಯೋಯೋ ಟೆಸ್ಟ್ ಎದುರಿಸಿದ ವೇಳೆ ಪಾಸ್ ಮಾಡಲು ವಿಫಲರಾಗಿದ್ದು, ಸದ್ಯ 2ನೇ ಬಾರಿ ಯೋಯೋ ಟೆಸ್ಟ್ ಎದುರಿಸಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಿಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಭುವನೇಶ್ವರ್ ಬೆನ್ನು ನೋವಿನ ಸಮಸ್ಯೆಯಿಂದ ಆರಂಭದ 3 ಟೆಸ್ಟ್ ಪಂದ್ಯಗಳಿಂದ ಹೊರ ನಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್‍ಗೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹ ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದು, ಈ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಆಯ್ಕೆ ಆಗಿದ್ದಾರೆ. ಇನ್ನು ಕುಲ್ ದೀಪ್ ಯಾದವ್, ಆರ್ ಆಶ್ವಿನ್, ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *