ನದಿಗೆ ಗಾಳ ಹಾಕಿದ್ದು ಮೀನಿಗಾಗಿ ಆದ್ರೆ ಸಿಕ್ಕಿದ್ದು ಮೊಸಳೆ ಮರಿ

Crocodile

ಶಿವಮೊಗ್ಗ : ತುಂಗಾ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯ ಗಾಳಕ್ಕೆ ಮೀನಿನ ಬದಲು ಮೊಸಳೆ ಮರಿ ಬಿದ್ದಿರುವ ಘಟನೆ ಶಿವಮೊಗ್ಗ ಸಮೀಪದ ಪಿಳ್ಳಂಗೆರೆ ಸಮೀಪ ನಡೆದಿದೆ.

ಪಿಳ್ಳಂಗೆರೆಯ ಲಕ್ಷ್ಮಿನಾರಾಯಣ ಸ್ವಾಮಿ ದೇವಸ್ಥಾನದ ಹಿಂಭಾಗದ ತುಂಗಾ ನದಿಯಲ್ಲಿ ರಶೀದ್ ಅವರು ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಮೀನು ಹಿಡಿಯಲು ಗಾಳ ಹಾಕಿದ್ದ ರಶೀದ್ ಅವರಿಗೆ ಮೀನಿನ ಬದಲು ಮೊಸಳೆ ಮರಿ ಸಿಕ್ಕಿದೆ. ಇದನ್ನೂ ಓದಿ: ಪ್ರಧಾನಿ ಭದ್ರತೆ ವಿಚಾರದಲ್ಲಿ ಅವರಿಗೇಕೆ ಮಾಹಿತಿ ನೀಡಬೇಕು? – ಚರಣ್‍ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ಕಿಡಿ

Crocodile

ದೇವಸ್ಥಾನದ ಹಿಂಭಾಗದಲ್ಲಿ ಇರುವ ನದಿಗೆ ನೀರು ಕುಡಿಯಲು ಜಾನುವಾರುಗಳು ಬರುತ್ತವೆ. ಅಲ್ಲದೇ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಗ್ರಾಮಸ್ಥರು ಕೈ, ಕಾಲು ತೊಳೆಯಲು ನದಿಗೆ ಇಳಿಯುತ್ತಾರೆ. ಹೀಗಾಗಿ ಈ ಭಾಗದಲ್ಲಿ ಮೊಸಳೆ ಮರಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಮೊಸಳೆ ಮರಿ ಪತ್ತೆಯಾಗಿರುವುದರಿಂದ ಈ ಭಾಗದಲ್ಲಿ ದೊಡ್ಡ ಮೊಸಳೆಯು ಇರಬಹುದು ಎಂಬ ಅನುಮಾನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ 2ನೇ ದಿನದ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ

Comments

Leave a Reply

Your email address will not be published. Required fields are marked *