ಬೆಂಗಳೂರು: ನೋಡಿ ಬೇಕಾದರೆ ನಾನು ಬೆಟ್ ತೆಗೆದುಕೊಳ್ಳುತ್ತೇನೆ. ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನ ಏನು ಬಯಸುತ್ತರೋ ಆ ರೀತಿಯ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ ಇಳಿಸಲಿದೆ. ಆದರೆ ನನ್ನ ಕುಟುಂಬದ ಯಾವ ಸದಸ್ಯರು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಯಾವಾಗಲೂ ರಾಜಕೀಯದಲ್ಲಿ ಕ್ಲೀಯರ್ ಆಗಿದ್ದೇನೆ. ರಾಜಕೀಯದಲ್ಲಿ ನನ್ನ ಆಚಾರ, ವಿಚಾರ, ಚಿಂತನೆ, ನಡೆ ಮತ್ತು ನುಡಿ ಇವೆಲ್ಲವೂ ಕೂಡ ಪಕ್ಷ, ಪಕ್ಷದ ಕಾರ್ಯಕರ್ತರ ಹಾಗೂ ಜನರ ಅಭಿಪ್ರಾಯವಾಗಿದೆ ಅಂತಾ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರಿದ ಸಿ.ಪಿ.ಯೋಗೇಶ್ವರ್ ಅವ್ರಿಗೆ ಟಾಂಗ್ ನೀಡಿದರು.

ಬುಧವಾರ ಚೆನ್ನಪಟ್ಟಣ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಸಿಎಂ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರಾಮನಗರ ಜಿಲ್ಲೆಯಲ್ಲೇ ಚನ್ನಪಟ್ಟಣಕ್ಕೆ ಅತೀ ಹೆಚ್ಚು ಅನುದಾನ ನೀಡಲಾಗಿದೆ. ಕೆರೆ ತುಂಬಿಸುವ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಹತ್ತು ಹಲವಾರು ಯೋಜನೆಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ ಅಂತಾ ಅಂದ್ರು.
ಪಬ್ಲಿಕ್ ಟಿವಿ ನಡೆಸಿದ ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ, ಹೈದರಾಬಾದ್ ಹಾಗೂ ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಓಟ್ ಶೇರಿಂಗ್ ಜಾಸ್ತಿ ಇರುವ ಅಂಶ ಬಹಿರಂಗವಾಗಿದೆ. ನಮ್ಮ ಸರ್ಕಾರದ ಯೋಜನೆಗಳು ರಾಜ್ಯದ ಜನತೆಗೆ ತಲುಪಿವೆ. ರಾಜ್ಯದ ಜನ ನಮ್ಮ ಪರವಾಗಿ ಇದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ ಅಂತಾ ತಿಳಿಸಿದರು.
https://www.youtube.com/watch?v=AdBjKaLEe1Y

Leave a Reply