ಡಿಕೆಶಿ, ಐಶ್ವರ್ಯಗಾಗಿ ದತ್ತನ ಮೊರೆ ಹೋದ ಅಭಿಮಾನಿಗಳು

ಕಲಬುರಗಿ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಪುತ್ರಿ ಐಶ್ವರ್ಯಗಾಗಿ ಅಭಿಮಾನಿಗಳು ಜಿಲ್ಲೆಯ ಶ್ರೀ ಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ನಿರ್ಗುಣ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಡಿಕೆಶಿ ಹಾಗೂ ಅವರ ಪುತ್ರಿ ಇಬ್ಬರೂ ಇಡಿ ತನಿಖೆಯನ್ನು ಸಮರ್ಪಕವಾಗಿ ಎದುರಿಸಿ ಹೊರಬರಲಿ ಎಂದು ಅಭಿಮಾನಿಗಳು ದತ್ತನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಡಿಕೆಶಿ ಅವರು ಐಟಿ ದಾಳಿಗೆ ಒಳಗಾದಾಗ ರಾಜಕೀಯ ಗುರು ದ್ವಾರಕನಾಥ ಸೂಚನೆಯಂತೆ ಈ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದರು. ನಮ್ಮ ನಾಯಕ ಹಾಗೂ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಆಶಿಸಿ ಅಭಿಮಾನಿಗಳು ಪೂಜೆ ಸಲ್ಲಿಸಿ, ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ:ಮನೆಗೋ? ಜೈಲಿಗೋ? ಇಡಿ ಕಸ್ಟಡಿಗೋ? – ಇಂದು ಡಿಕೆಶಿ ಭವಿಷ್ಯ ನಿರ್ಧಾರ

ಇನ್ನೊಂದೆಡೆ ಇಡಿ ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶಿವಕುಮಾರ್ ಅವರನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇಂದೇ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯಲಿದೆ.

ಗುರುವಾರ ಒಂದು ಕಡೆ ಐಶ್ವರ್ಯ ವಿಚಾರಣೆ ನಡೆದಿದ್ದರೆ ಮಗದೊಂದು ಕಡೆ ಡಿಕೆಶಿ ವಿಚಾರಣೆ ನಡೆಯಿತು. ಆದರೆ, ವಿಚಾರಣೆ ವೇಳೆ ಡಿಕೆಶಿಗೆ ಹೈಬಿಪಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲೇ ಇದ್ದ ಸಂಬಂಧಿ ಶಾಸಕ, ಡಾ. ರಂಗನಾಥ್ ಅವರು ತಪಾಸಣೆ ಮಾಡಿದರು. ನಂತರ ಡಿಕೆಶಿ ಅವರನ್ನು ಹತ್ತಿರದ ಆರ್‍ಎಂಎಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ, ಡಿಕೆ ಸುರೇಶ್ ಆಪ್ತ ವೈದ್ಯ ಜುಬಿನ್ ಸಲಹೆ ಮೇರೆಗೆ ಡಿಕೆಶಿಗೆ ಔಷಧಿ ತಂದುಕೊಟ್ಟರು. ಬಳಿಕ ಇಸಿಜಿ ಮಾಡಿದ್ದು, ಡಿಕೆಶಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Comments

Leave a Reply

Your email address will not be published. Required fields are marked *