ಕನ್ನಡಿಗರಿಗೇ ಸಂದ ಅನಂತ್ ಕುಮಾರ್ ಖಾತೆ

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಒಂದು ಖಾತೆಯ ಜವಾಬ್ದಾರಿಯನ್ನು ಕನ್ನಡಿಗ, ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಅನಂತ್ ಕುಮಾರ್ ನಿಧನದಿಂದ ಖಾಲಿಯಾಗಿದ್ದ ಖಾತೆಗಳ ಹಂಚಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಫಾರಸ್ಸು ಹೊರಡಿಸಿದ್ದರು. ಅದಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅಂಕಿತ ಹಾಕಿದ್ದು, ಡಿ.ವಿ.ಸದಾನಂದಗೌಡ ಹಾಗೂ ನರೇಂದ್ರ ಸಿಂಗ್ ಥೋಮರ್ ಅವರಿಗೆ ತಲಾ ಒಂದರಂತೆ ಹೆಚ್ಚುವರೆ ಖಾತೆಗಳ ಹಂಚಿಕೆ ಮಾಡಲಾಗಿದೆ.

ಸ್ಯಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನಗಳ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ಥೋಮರ್ ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *