ಲಾಕ್‍ಡೌನ್ ಹಿನ್ನೆಲೆ: ಕಳ್ಳಬಟ್ಟಿ ತಯಾರಿಗೆ ಮುಂದಾದ ವ್ಯಕ್ತಿ ಪೊಲೀಸ್ ಬಲೆಗೆ

ಮಂಗಳೂರು: ಕಳ್ಳಬಟ್ಟಿ ತಯಾರಿಗೆ ಮುಂದಾದ ಓರ್ವನನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

ಬೆಳ್ಳಾರೆ ಕಲ್ಲೋಣಿಯ ಜನಾರ್ದನ ಮನೆಯಲ್ಲಿ ಗೇರುಹಣ್ಣಿನ ಕಳ್ಳಭಟ್ಟಿ ತಯಾರಿಸಲು ಮುಂದಾದ ವ್ಯಕ್ತಿ. ಲಾಕ್‍ಡೌನ್‍ನಿಂದಾಗಿ ಮದ್ಯದಂಗಡಿಗಳಿಗೂ ಬೀಗ ಬಿದ್ದಿದೆ. ಆದರೆ ಕೆಲವು ಕಡೆ ಕಳ್ಳಬಟ್ಟಿ, ಅಕ್ರಮ ಮದ್ಯ ಮಾಟರಾ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಖಚಿತ ಮಾಹಿತಿ ಮೇರೆಗೆ ಈತನ ಆಕ್ರಮ ಮದ್ಯದ ಅಡ್ಡೆಗೆ ದಾಳಿ ಮಾಡಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಗೇರು ಹಣ್ಣಿನ ರಸ, ಗೇರುಹಣ್ಣಿನ ಸಾರಾಯಿ ಮತ್ತು ಅದಕ್ಕೆ ಸಂಬಂಧಿಸಿದಂತೆ ತಯಾರು ಮಾಡುವ ಪಾತ್ರೆಗಳನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ. ಈ ಸಂಬಂಧ ಬೆಳ್ಳಾರೆ ಪೋಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *