ಸ್ನೇಹಿತನಿಗೆ ಸರ್ಪ್ರೈಸ್ ನೀಡಿದ ಡಿ ಬಾಸ್

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಬಾಲ್ಯ ಗೆಳೆಯನಿಗೆ ಸರ್ಪ್ರೈಸ್ ನೀಡಿದ್ದಾರೆ.

ಬಾಲ್ಯ ಗೆಳೆಯ ಶ್ರೀಧರ್ ಮೈಸೂರು ಮಹಾ ನಗರ ಪಾಲಿಕೆ ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು, ಗೆಳೆಯ ಶ್ರೀಧರ್ ಗಾಗಿ ಮೈಸೂರಿಗೆ ಆಗಮಿಸಿ ಅಭಿನಂದನೆ ಸಲ್ಲಿಸಿದ್ದರು. ಇಷ್ಟು ಮಾತ್ರವಲ್ಲದೇ ತಾವೇ ಹೋಟೆಲ್ ನಲ್ಲಿ ಔತಣಕೂಟ ಏರ್ಪಡಿಸಿ, ಭರ್ಜರಿ ಪಾರ್ಟಿ ನೀಡಿದ್ದಾರೆ. ತಮ್ಮ ಎಲ್ಲ ಗೆಳೆಯರೊಂದಿಗೆ ಸೇರಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಗೆಳೆಯನ ಜೊತೆಗಿರುವ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಮೊದಲ ಬಾರಿಗೆ ತ್ರಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಆಂಜನೇಯನ ವೇಷದಲ್ಲಿರುವ ಮೋಷನ್ ಪೋಸ್ಟರ್ ಲುಕ್ ರಿಲೀಸ್ ಆಗಿತ್ತು.

Comments

Leave a Reply

Your email address will not be published. Required fields are marked *