ಪ್ರೀತಿ ಮಾಡಿ ನೇಣಿಗೆ ಶರಣಾದ ಪದವಿ ವಿದ್ಯಾರ್ಥಿ

ಕೋಲಾರ: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೂರಂಡಳ್ಳಿ ಗ್ರಾಮದಲ್ಲಿ ನಡೆದಿದೆ.

ಕೂರಂಡಳ್ಳಿ ಗ್ರಾಮದ ನಿವಾಸಿ ನವೀನ್ (20) ಆತ್ಮಹತ್ಯೆ ಗೆ ಶರಣಾದ ಭಗ್ನ ಪ್ರೇಮಿ. ಈತ ಮಾಲೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು. ಆದರೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವೀನ್ ತನ್ನ ತರಗತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಜೊತೆಗೆ ಇತ್ತೀಚೆಗೆ ತನ್ನ ಪ್ರೇಮ ನಿವೇಧನೆಯನ್ನ ಆಕೆಯ ಬಳಿ ಹೇಳಿಕೊಂಡಿದ್ದನು. ಆದರೆ ಆಕೆ ನವೀನ್ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದಾಗಿ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ನವೀನ್ ಸ್ನೇಹಿತರು ಹೇಳಿದ್ದಾರೆ.

ಇನ್ನು ಈ ಘಟನೆ ನಡೆದ ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *