ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

ನವದೆಹಲಿ: ಕೊನೆಗೂ ದೆಹಲಿ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದ್ದು, ಮಾರ್ಚ್ 20ರ ಬೆಳಗ್ಗೆ 5:30ಕ್ಕೆ 4 ಮಂದಿ ದೋಷಿಗಳನ್ನು ಗಲ್ಲಿಗೇರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರತಿ ಬಾರಿ ಗಲ್ಲಿಗೇರಿಸುವ ದಿನಾಂಕವನ್ನು ನಿಗದಿಗೊಳಿಸಿದಾಗಲೂ ಒಂದಲ್ಲಾ ಒಂದು ಕಾರಣ ಹೇಳಿ ಅತ್ಯಾಚಾರಿಗಳು ನೇಣು ಕುಣಿಕೆಯಿಂದ ಬಚಾವ್ ಆಗುತ್ತಾ ಬಂದಿದ್ದರು. ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಡೆಸಿದ್ದಾ ಎಲ್ಲಾ ಪ್ರಯತ್ನವೂ ವಿಫಲವಾಗಿದ್ದು, ಇಂದು ದೆಹಲಿ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿಗೊಳಿಸಿದೆ.

ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ ಬೆನ್ನಲ್ಲೇ ತಿಹಾರ್ ಜೈಲು ಆಡಳಿತ ಹಾಗೂ ದೆಹಲಿ ಸರ್ಕಾರ ಪಟಿಯಾಲ ಕೋರ್ಟ್ ಮೊರೆ ಹೋಗಿತ್ತು.

ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ ಆಗಿದ್ದು, ನಾಲ್ವರು ದೋಷಿಗಳ ಬಹುತೇಕ ಕಾನೂನು ಹೋರಾಟ ಅಂತ್ಯವಾಗಿದೆ. ಹಾಗಾಗಿ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಮಾರ್ಚ್ 3ರಂದು ಪಟಿಯಾಲಾ ಕೋರ್ಟ್ ಮೂರನೇ ಬಾರಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಕಡೆ ಗಳಿಗೆಯಲ್ಲಿ ದೋಷಿ ಪವನ್ ಗುಪ್ತಾ ರಾಷ್ಟ್ರಪತಿಗೆ ತಿರಸ್ಕೃತಗೊಂಡ ಕ್ಷಮದಾನ ಅರ್ಜಿ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದನು. ದಿಢೀರ್ ಬೆಳವಣಿಗೆಯಿಂದ ಮಾರ್ಚ್ 3ರಂದು ನಡೆಬೇಕಿದ್ದ ಗಲ್ಲು ಶಿಕ್ಷೆಗೆ ಪಟಿಯಾಲ ಕೋರ್ಟ್ ತಡೆ ನೀಡಿತ್ತು.

Comments

Leave a Reply

Your email address will not be published. Required fields are marked *