ಕಲಾಪ ನಡೆಯುತ್ತಿದ್ದಾಗ ಮೊಬೈಲ್ ನಲ್ಲಿ ಬ್ಯುಸಿಯಾದ ಯತೀಂದ್ರ ಸಿದ್ದರಾಮಯ್ಯ – ವಿಡಿಯೋ ನೋಡಿ

ಬೆಂಗಳೂರು: ವಿಧಾನಸಭೆಯಲ್ಲಿ ಅಭಿವೃದ್ಧಿ ಕುರಿತ ಗಂಭೀರ ಚರ್ಚೆ ನಡೀತಿದ್ರೆ, ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತ್ರ ಅದಕ್ಕೂ ತಮಗೂ ಸಂಬಂಧವಿಲ್ಲವೇನೋ ಎನ್ನುವಂತೆ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಫೇಸ್ ಬುಕ್ ನೋಡುತ್ತ ತಮಗೆ ಕಲಾಪ ಸಂಬಂಧವಿಲ್ಲವೇನೋ ಎಂಬಂತೆ ಕುಳಿತಿದ್ದರು.

ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಕೆಲ ಶಾಸಕರು ಮೊಬೈಲ್ ಬಳಕೆಯಲ್ಲಿ ಬ್ಯುಸಿ ಆಗಿದ್ದರು. ಬಿಜೆಪಿ ಶಾಸಕ ವಿರುಪಾಕ್ಷಪ್ಪ ಮೊಬೈಲ್ ಬಳಸುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆ ಸದನದಲ್ಲಿ ಮಾಸಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಬ್ಯುಸಿ ಆಗಿದ್ದು ಕಂಡುಬಂದಿತು.

ಸದನಕ್ಕೆ ಮೊಬೈಲ್ ತರಬಾರದೆಂಬ ನಿಯಮವಿದೆ. ಆದರೆ ಈ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿದ ಯತೀಂದ್ರ ಸಿದ್ದರಾಮಯ್ಯ ಸದನಕ್ಕೆ ಮೊಬೈಲ್ ತಂದಿದ್ದರು. ಅಲ್ಲದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಚಿಂತನೆ ಮಾಡಬೇಕಾದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಹರಿಸುತ್ತಿದ್ದರು.

Comments

Leave a Reply

Your email address will not be published. Required fields are marked *