ವಿಷ ಪ್ರಸಾದ ಪ್ರಕರಣ- ದೇವಸ್ಥಾನದ ಆವರಣದಲ್ಲಿ ಭಕ್ತೆಯ ಗೋಳಾಟ

ಚಾಮರಾಜನಗರ: ಸುಳ್ವಾಡಿ ವಿಷ ದುರಂತದ ಪ್ರಕರಣದ ಹಿನ್ನೆಲೆಯಲ್ಲಿ ದೇವರ ದರ್ಶನ ಸಿಗದೇ ಭಕ್ತರು ದೇವಸ್ಥಾನದ ಆವರಣದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.

ಕಳೆದ 20 ದಿನಗಳಿಂದ ಮಾರಮ್ಮ ದೇವಸ್ಥಾನ ಬಂದ್ ಆಗಿದ್ದು, ಯಾವುದೇ ಭಕ್ತರಿಗೆ ದೇವರ ದರ್ಶನಕ್ಕೆ ಅನುಮತಿ ನೀಡುತ್ತಿಲ್ಲ. ಇಷ್ಟು ದಿನ ಸಾವಿರಾರು ಭಕ್ತರು ನಿನ್ನ ಅಂಗಳದಲ್ಲಿ ತುಂಬಿ ತುಳುಕುತ್ತಿದ್ದರು. ನಿನ್ನ ಪ್ರಸಾದಕ್ಕೆ ವಿಷ ಹಾಕಿ ನಿನಗೆ ಕೆಟ್ಟ ಹೆಸರು ತಂದರಲ್ಲವ್ವಾ ತಾಯಿ. ವಿಷ ಹಾಕುವಾಗಲೇ ಆ ವಿಷ ನುಂಗಿ ಅವರಿಗೆ ಕಚ್ಚಬಾರದಿತ್ತಾ ತಾಯಿ ಎಂದು ಮಾರಮ್ಮ ದೇವಸ್ಥಾನದ ಆವರಣದಲ್ಲಿ ಭಕ್ತೆ ಕಣ್ಣೀರಿಡುತ್ತಿದ್ದಾರೆ.

ಇತ್ತ ಸುಳ್ವಾಡಿಗೆ ಮುಜರಾಯಿ ಸಚಿವ ಪರಮೇಶ್ವರ್ ನಾಯಕ್ ಭೇಟಿ ನೀಡಿ, ಸುಳ್ವಾಡಿ ಮಾರಮ್ಮ ದೇವಸ್ಥಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲು ಶೀಘ್ರದಲ್ಲೇ ತೀರ್ಮಾನ ಮಾಡಲಗುವುದು. ಸರ್ಕಾರದ ವಶಕ್ಕೆ ಪಡೆದುಕೊಳ್ಳುವಂತೆ ದೇವಸ್ಥಾನದ ಟ್ರಸ್ಟಿಗಳು ಪತ್ರ ಬರೆದಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳ ಸಹಮತವೂ ಇದೆ. ಇದೆಲ್ಲವನ್ನು ಕ್ರೋಢೀಕರಿಸಿ ಸಚಿವ ಸಂಪುಟದಲ್ಲಿಟ್ಟು ತೀರ್ಮಾನ ಕೈಗೊಳ್ಳತ್ತದೆ. ರಾಜ್ಯದ ಇತರ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *