ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಡಿಜಿಪಿ ನೀಲಮಣಿ ರಾಜು ಭೇಟಿ – ಖಡಕ್ ಸೂಚನೆ ಕೊಟ್ಟ ಎಚ್‍ಡಿಕೆ

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನಿವಾಸಕ್ಕೆ ಇಂದು ಡಿಜಿಪಿ ನೀಲಮಣಿ ಎನ್. ರಾಜು ಅವರು ಭೇಟಿ ನೀಡಿದ್ದಾರೆ.

ನೀಲಮಣಿ ಜೊತೆ ಇಂಟಲಿಜೆನ್ಸ್ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಕೂಡ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದರು. ಗುರುವಾರ ಕೂಡ ವಿಧಾನ ಸೌಧದಲ್ಲಿ ಸಿಎಂ ಜೊತೆ ಸಭೆ ನಡೆಸಲಾಗಿತ್ತು. ಇಂದು ಈ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಸಿಎಂ ಭೇಟಿ ಬಳಿಕ ಡಿಜಿಪಿ ನೀಲಮಣಿ ಎನ್ ರಾಜು ಮಾದ್ಯಮರೊಂದಿಗೆ ಮಾತನಾಡಿ, ಕಾನೂನು ಸುವ್ಯಸ್ಥೆಯ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ವೇಳೆ ಸಿಎಂ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಗಲಾಟೆ ಏನು ಆಗಬಾರದು. ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜನತಾ ಸೇವೆ ಮಾಡಬೇಕು ಎಂಬ ಅಂಶಗಳ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *