ಗ್ರಾಮದಲ್ಲಿಲ್ಲ ಒಂದೇ ಒಂದು ಆಸ್ಪತ್ರೆ- ಪ್ರಧಾನಿಗೆ ಯುವಕ ಬರೆದ ಪತ್ರಕ್ಕೆ ಸ್ಪಂದನೆ

ಧಾರವಾಡ: ಅದೊಂದು ಸಣ್ಣ ಹಳ್ಳಿ. ಅಲ್ಲಿಯ ಜನರು ಇಷ್ಟು ದಿನಗಳಿಂದ ತಮ್ಮ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಇಲ್ಲದೇ ಪರದಾಟ ನಡೆಸಿದ್ದರು. ಈಗ ಆ ಆಸ್ಪತ್ರೆ ಇಲ್ಲದ ಕೊರಗು ದೂರವಾಗಲಿದೆ. ಇದಕ್ಕೆ ಕಾರಣ ಅಂದರೆ ಪ್ರಧಾನಿ ಮೋದಿ. ಧಾರವಾಡದ ಹೊಸ ತೇಗೂರ ಗ್ರಾಮ. ಈ ಗ್ರಾಮ ಮತ್ತು ಅಕ್ಕಪಕ್ಕದ 12 ಹಳ್ಳಿಗಳಲ್ಲಿ ಯಾವುದೇ ಆಸ್ಪತ್ರೆಗಳಿಲ್ಲ. ಹೀಗಾಗಿ ಇಲ್ಲಿನ ಜನ್ರು ಏನಾದ್ರು ಆದ್ರೆ ಧಾರವಾಡ ಪಟ್ಟಣ ಅಥವಾ ಬೆಳಗಾವಿಯ ಕಿತ್ತೂರಿಗೇ ಹೋಗ್ಬೇಕಾದ ಪರಿಸ್ಥಿತಿ ಇದೆ.

ಈ ಬಗ್ಗೆ ಗ್ರಾಮದ ರುದ್ರಪ್ಪ ಗಾಣಿಗೇರ ಎಂಬ ಯುವಕ ಪ್ರಧಾನಿ ಮೋದಿ ಕಚೇರಿಗೆ ಮೇಲ್ ಮಾಡಿ ಸಮಸ್ಯೆ ಗಮನಕ್ಕೆ ತಂದಿದ್ದರು. ಮೇಲ್ ಸಿಕ್ಕ ತಕ್ಷಣ ಪ್ರಧಾನಿ ಮೋದಿ ಕಚೇರಿಯಿಂದ ರೆಸ್ಪಾನ್ಸ್ ಬಂದಿದ್ದು, ಧಾರವಾಡ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಹೊಸ ತೇಗೂರ ಗ್ರಾಮ ಪಂಚಾಯ್ತಿ ಕೂಡಾ ಆಸ್ಪತ್ರೆಗಾಗಿ ಜಮೀನು ನೀಡಲು ಮುಂದಾಗಿದ್ದು, ಗ್ರಾಮದ ಹೊರವಲಯದ ಗೋಮಾಳ ಜಮೀನನ್ನು ನೀಡಲು ಠರಾವ್ ಪಾಸ್ ಮಾಡಿದೆ. ಹಲವು ವರ್ಷಗಳಿಂದ ಆಸ್ಪತ್ರೆಯಿಲ್ಲದೆ ಪರದಾಡುತ್ತಿದ್ದ ಈ ಗ್ರಾಮದ ಜನರಿಗೆ ಹೊಸದೊಂದು ಆಸೆ ಚಿಗುರಿದೆ.

Comments

Leave a Reply

Your email address will not be published. Required fields are marked *