ಜೈಲು ರಹಸ್ಯ ಬೇಧಿಸಿದ ರೂಪಾಗೆ ಎತ್ತಂಗಡಿ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣವನ್ನು ಬಯಲಿಗೆ ಎಳೆದ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ.

ಹೌದು, ಡಿಐಜಿ ರೂಪಾ ಮತ್ತು ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ವರ್ಗಾವಣೆ ಗೊಳಿಸಿ ಆದೇಶಿಸಿದೆ. ರೂಪಾ ಅವರನ್ನ ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದೆ.

ಬಂಟ್ವಾಳ ಗಲಾಟೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದಕ್ಕೆ ಎಂಎನ್ ರೆಡ್ಡಿ ಅವರನ್ನು ಎಸಿಬಿಗೆ ಸರ್ಕಾರ ವರ್ಗಾಯಿಸಿದೆ. ಗುಪ್ತಚರ ಇಲಾಖೆಯ ಐಜಿಯಾಗಿ ಅಮೃತ್ ಪೌಲ್ ನೇಮಕವಾಗಿದ್ದರೆ, ಕಾರಾಗೃಹದ ಎಡಿಜಿಪಿಯಾಗಿ ಮೇಘರಿಕ್ ನೇಮಕವಾಗಿದ್ದಾರೆ.

 

https://youtu.be/VUvHqCfFg0E

 

https://youtu.be/5NYUIeTEy-8

Comments

Leave a Reply

Your email address will not be published. Required fields are marked *