ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ- ಪತ್ರಕರ್ತರ ವಿರುದ್ಧ ಅಮಿನ್ ಮಟ್ಟು ಕಿಡಿ

ತುಮಕೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಪ್ರಶ್ನೆ ಮಾಡಿದ ಪತ್ರಕರ್ತರ ವಿರುದ್ಧ ಹಿರಿಯ ಪತ್ರಕರ್ತ, ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಘಟನೆ ನಡೆಯಿತು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರಾವಳಿಯಲ್ಲಿನ ಕೋಮುಗಲಭೆ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣ ಎಂಬ ಆರೋಪ ಇದೆ ಎಂಬ ಪ್ರಶ್ನೆಗೆ ಆಕ್ರೋಶ ಭರಿತರಾದ ಸಿದ್ದಲಿಂಗಯ್ಯ ಹಾಗೂ ದಿನೇಶ್ ಅಮಿನ್ ಮಟ್ಟು, ಆರೋಪಗಳನ್ನು ಪ್ರಶ್ನಿಸಬೇಡಿ, ದಾಖಲೆ ಸಹಿತ ತೋರಿಸಿ ಎಂದು ಪತ್ರಕರ್ತರನ್ನು ಬಾಯಿ ಮುಚ್ಚಿಸಲು ಯತ್ನಿಸಿದರು.

ಎಸ್ ಜಿ ಸಿದ್ದರಾಮಯ್ಯ ಅವರು ಚಿಕ್ಕನಾಯಕನ ಹಳ್ಳಿ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ಅವರನ್ನು ಬೆಂಬಲಿಸುತ್ತಿರಿ ಎನ್ನುವ ಆರೋಪದ ಪ್ರಶ್ನೆ ಕೇಳಿದಾಗ ಸಿದ್ದರಾಮಯ್ಯ ಕೆಂಡಾಮಂಡಲವಾಗಿ ಯಾವ ಮೂರ್ಖರು ಹಾಗಂತ ಹೇಳಿದ್ದು? ಎಂದು ಏರು ಧ್ವನಿಯಲ್ಲಿ ಮಾತನಾಡಿ ಮಾಧ್ಯಮದವರ ಬಾಯಿ ಮುಚ್ಚಿಸುವ ಯತ್ನಮಾಡಿದರು.

ಸುದ್ದಿಗೋಷ್ಠಿ ನಡೆಸಲು ಬಂದಿದ್ದ ದಿನೇಶ್ ಅಮಿನ್ ಮಟ್ಟು ಹಾಗೂ ಸಿದ್ದರಾಮಯ್ಯರ ಧೋರಣೆ ಖಂಡಿಸಿ ಪತ್ರಕರ್ತರು ಪ್ರತಿದಾಳಿ ನಡೆಸಿದಾಗ ಸುಮ್ಮನಾಗಿ ಉತ್ತರ ನೀಡತೊಡಗಿದರು.

Comments

Leave a Reply

Your email address will not be published. Required fields are marked *