ವ್ಯವಸ್ಥೆ ಬದಲಾಗದ ಹೊರತು ಏನು ಮಾಡಲು ಆಗಲ್ಲ: ಟಬು ರಾವ್

ಬೆಂಗಳೂರು: ವ್ಯವಸ್ಥೆ ಬದಲಾಗದ ಹೊರತು ಮಾಡಲು ಆಗುವುದಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಹೇಳಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿದ ಅವರು ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ ಪಕ್ಷದ ಕುರಿತಾಗಿ ಹಂಚಿಕೊಂಡಿದ್ದಾರೆ. ಅದರಲ್ಲೂ ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷದ ಗೆಲುವನ್ನು ಬಗ್ಗೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣಾ ಫಲಿತಾಂಶ ಕರ್ನಾಟಕ ಕಾಂಗ್ರೆಸ್‌ಗೆ ಪಾಠವಾಗುತ್ತಾ?

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯೂ ಮತ್ತೊಮ್ಮೆ ಎಲ್ಲವನ್ನು ಧೂಳಿಪಟ ಮಾಡಿದೆ. ಆದರೆ ಆಮ್ ಆದ್ಮಿ ಪಕ್ಷವು ಅಸಾಧಾರಣ ಗೆಲುವು ಸಾಧಿಸಿದ್ದು, ನಿಜಕ್ಕೂ ಅರವಿಂದ್ ಕೇಜ್ರಿವಾಲ್ ಅವರು ಸಮರ್ಥ ನಾಯಕರಾಗಿ ಹೊರಹೊಮ್ಮಿದ್ದಾರೆ. ವ್ಯವಸ್ಥೆ ಬದಲಾಗದೇ ಜನರೂ ಎಷ್ಟೇ ಕಷ್ಟ ಪಟ್ಟರೂ ಯಾವುದೇ ಪ್ರಯೋಜನವಿಲ್ಲ. ವ್ಯವಸ್ಥೆ ಬದಲಾಗದ ಹೊರತು ಏನನ್ನು ತರಲಾಗುವುದಿಲ್ಲ ಎಂದು ಕಾಂಗ್ರೆಸ್ ಕುರಿತಾಗಿ ತಿಳಿಸಿದರು. ಇದನ್ನೂ ಓದಿ:  Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌

Comments

Leave a Reply

Your email address will not be published. Required fields are marked *