ದಿವಂಗತ ಮಂಜುನಾಥನ ಗೆಳೆಯರು ಟ್ರೇಲರ್ ಬಿಡುಗಡೆ

ಬೆಂಗಳೂರು: ಈ ಹಿಂದೆ ಎಣ್ಣೆ ಪಾರ್ಟಿ ಎಂಬ ಕಿರುಚಿತ್ರವನ್ನು ನಿರ್ಮಿಸಿ ಗುರುತಿಸಿಕೊಂಡಿದ್ದ ನಿರ್ದೇಶಕ ಅರುಣ್ ಎನ್.ಡಿ. ಈಗ ಬೆಳ್ಳಿ ತೆರೆಗೂ ಕಾಲಿಟ್ಟಿದ್ದಾರೆ. ದಿವಂಗತ ಮಂಜುನಾಥನ ಗೆಳೆಯರು ಎಂಬ ಚಲನಚಿತ್ರದ ಮೂಲಕ ಅರುಣ್ ಈಗ ನಿರ್ದೇಶಕರಾಗಿದ್ದು ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿಸಿ ಬಿಡುಗಡೆಗೆ ಸಿದ್ಧಗೊಳಿಸಿದ್ದಾರೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಕಳೆದ ವಾರ ನಡೆಯಿತು.

5 ಜನ ಇಂಜಿನಿಯರಿಂಗ್ ಸ್ನೇಹಿತರು ಬಹಳ ವರ್ಷಗಳ ನಂತರ ಗ್ಯಾಪ್ ನಂತರ ಭೇಟಿಯಾಗುತ್ತಾರೆ. ಆದರೆ ಅವರೆಲ್ಲ ಸಂಧಿಸುವುದು ಒಂದು ಪೊಲೀಸ್ ಠಾಣೆಯಲ್ಲಿ. ಹೀಗೆ ಸಂಧಿಸುವ ಸಂದರ್ಭ ಹೇಗೆ, ಏಕೆ ಎಂಬುದುದನ್ನು ಹೇಳುವ ಚಿತ್ರವೇ ದಿವಂಗತ ಮಂಜುನಾಥನ ಗೆಳೆಯರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಹಾಗೂ ನಿರ್ಮಾಪಕರು ಆದ ಅರುಣ್ ಇದೊಂದು ಮಲ್ಟಿ ಲೇಯರ್ ಸಿನಿಮಾ. 10 ವರ್ಷ ಕಳೆದ ನಂತರ ಈ ಸಿನಿಮಾ ನೋಡಿದರೂ ಹಳೆಯದು ಅನಿಸುವುದಿಲ್ಲ. ಸುಮಾರು 6-7 ತಿಂಗಳ ಕಾಲ ಕೂತು ಈ ಸ್ಕ್ರಿಪ್ಟ್ ಮಾಡಿದ್ದೇವೆ. ಟೈಟಲ್ ಕ್ಯಾಚಿಯಾಗಿದೆ ಅನಿಸಿತು, ಹಾಗಾಗಿ ದಿವಂಗತ ಮಂಜುನಾಥ ಗೆಳೆಯರು ಅಂತ ಹೆಸರಿಟ್ಟಿದ್ದೇವೆ. ಇಡೀ ಚಿತ್ರದಲ್ಲಿ ಈ ಟೈಟಲ್ ಕ್ಯಾರಿಯಾಗುತ್ತದೆ.

ನಮ್ಮ ಚಿತ್ರದಲ್ಲಿ 90 ರಷ್ಟು ಹೊಸ ಕಲಾವಿದರೇ ನಟಿಸಿದ್ದಾರೆ. ಎಲ್ಲರನ್ನೂ ಆಡಿಷನ್ ಮೂಲಕವೇ ಸೆಲೆಕ್ಟ್ ಮಾಡಿದ್ದೇವೆ. ಪುಟ್ಟಣ್ಣ ಸ್ಟುಡಿಯೋ, ಭೂಮಿಕ ಎಸ್ಟೇಟ್ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಸೆನ್ಸಾರ್ ಆಗಿದ್ದು ಯ/ಎ ಸರ್ಟಿಫಿಕೇಟ್ ಸಿಕ್ಕಿದೆ. ಇದೊಂದು ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರ. ಸಿನಿಮಾ ಆಗಸ್ಟ್ ಮೊದಲ ವಾರ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು. ರುದ್ರ ಪ್ರಯಾಗ್ ಹಾಗೂ ಶೀತಲ್ ಪಾಂಡ್ಯ ಪ್ರಮುಕ ಪಾತ್ರದಲ್ಲಿ ನಟಿಸಿದ್ದು ಶಂಕರ್ ಮೂರ್ತಿ, ಅವಿನಾಶ್, ಮುದ್ದಪ್ಪ, ಸತೀಶ್ ಉಳಿದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ವಿನಯ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಸತೀಶ್ ಆರ್ಯನ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಅರುಣ್ ಹಾಗೋ ಗೋಪಿ ಶೀಗೆಹಳ್ಳಿ ಸಾಹಿತ್ಯ ಬರೆದಿದ್ದಾರೆ. ರವಿಪೂಜಾರ್ ಈ ಚಿತ್ರದ ಕಲಾ ನಿರ್ದೇಶನ ಹಾಗೂ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ರುದ್ರ ಪ್ರಯಾಗ್ ಐಟಿ ಕಂಪನಿಯಲ್ಲಿ ವರ್ಕ್ ಮಾಡುತ್ತಿದ್ದವರು ಒಬ್ಬ ಕಲಾವಿದನಾಗಬೇಕೆಂಬ ಆಸೆಯಿಂದ ಕೆಲಸ ತೊರೆದು ಚಿತ್ರ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *