ದೆಹಲಿಯಲ್ಲಿ ಬೀಡು ಬಿಟ್ಟ ಡಿಕೆಶಿಗೆ ಡಬಲ್ ಟೆನ್ಷನ್‍

ಬೆಂಗಳೂರು: ದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಡಬಲ್ ಟೆನ್ಷನ್ ನಲ್ಲಿ ಸಿಲುಕಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ವಿಳಂಬವಾದ ಹಿನ್ನೆಲೆ ಹೈಕಮಾಂಡ್ ಭೇಟಿಗೆ ಡಿ.ಕೆ.ಶಿವಕುಮಾರ್ ಪ್ರಯತ್ನದಲ್ಲಿದ್ದಾರೆ. ತಮ್ಮ ಪಟ್ಟಾಭಿಷೇಕದ ಮುಹೂರ್ತದೊಂದಿಗೆ ರಾಜ್ಯಕ್ಕೆ ಬರಲು ಡಿಕೆ ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಇದರ ಮಧ್ಯದಲ್ಲಿ ದೆಹಲಿಯಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಿ ಐಟಿ-ಇಡಿ ಕಾನೂನು ತೊಡಕುಗಳಿಗೆ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳಿಂದ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಂಜೆ ಅಥವಾ ನಾಳೆ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಒಂದು ಕಡೆ ಕೆಪಿಸಿಸಿ ಪಟ್ಟದ ಚಿಂತೆ ಮತ್ತೊಂದು ಕಡೆ ಕಾನೂನು ಕುಣಿಕೆಯಿಂದ ಪಾರಾಗಲು ಸತತವಾಗಿ ವಕೀಲರ ಜೊತೆ ಚರ್ಚೆಯಲ್ಲಿ ಬ್ಯುಸಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *