ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಗ್ಗೆ ಸರ್ಕಾರಕ್ಕೆ, ಸಿಎಂಗೆ ಬದ್ಧತೆಯಿಲ್ಲ: ಡಿ.ಕೆ.ಶಿವಕುಮಾರ್

ರಾಯಚೂರು: ಜನ ಬಿಜೆಪಿ (BJP) ಸರ್ಕಾರವನ್ನು ಕಿತ್ತುಹಾಕಬೇಕು ಎನ್ನುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ (SC-ST Reservation) ಹೆಚ್ಚಳಕ್ಕೆ ಮುಂದಾಗಿದ್ದಾರೆ. ಈಗಲೂ ಹಾವು ಸಾಯಬಾರದು ಕೋಲು ಮುರಿಬಾರದು ಎಂಬುವಂತಹ ಪ್ರಯತ್ನ ಮಾಡಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ರಾಯಚೂರಿನ ಗಿಲ್ಲೆಸುಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಮಾಡಿದ ಅವರು, ನ್ಯಾ.ನಾಗಮೋಹನ್ ದಾಸ ವರದಿ ಬಂದು ಮೂರು ವರ್ಷ ಬಳಿಕ ಈಗ ಮೀಸಲಾತಿ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದ್ದಾರೆ. ಮೊದಲು ಮುಖ್ಯಮಂತ್ರಿಗಳು ಎಲ್ಲಾ ಕೆಲಸ ಬಿಟ್ಟು ದೆಹಲಿಗೆ ಹೋಗಿ 9 ಶೆಡ್ಯೂಲ್ ಕೊಡಬೇಕೋ ಇಲ್ಲ ಅಂದರೆ ಏನು ಮಾಡಬೇಕೋ ಅದನ್ನು ಮಾಡಲು ಮುಂದಾಗಲಿ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಅಂತ ಹೇಳಿಕೊಳ್ಳುತ್ತದೆ, ಆದರೆ ಎರಡು ಇಂಜಿನ್‍ಗಳು ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬೇಡ; ವಿಶೇಷ ಅಧಿವೇಶನ ಕರೆಯಿರಿ – ಸಿದ್ದರಾಮಯ್ಯ

ಬಿಜೆಪಿ ಸರ್ಕಾರಕ್ಕೆ ಸಿಎಂಗೆ ಎಸ್‍ಸಿ, ಎಸ್‍ಟಿ ಬಗ್ಗೆ ಬದ್ಧತೆಯಿಲ್ಲ. ಹಿಂದುಳಿದ ವರ್ಗ, ಬಡವರು, ಅಲ್ಪಸಂಖ್ಯಾತರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಮೊದಲು ನುಡಿದಂತೆ ನೀವು ನಡೆಯಬೇಕು, ಇಲ್ಲದಿದ್ದರೆ ಕಾಂಗ್ರೆಸ್ ತನ್ನ ನಿರ್ಧಾರ ಏನು ಅಂತ ಹೇಳುತ್ತದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಅಸಮಾಧಾನ ಇರೋದು ನಿಜ- JDS ಎಂಎಲ್‌ಸಿ ಅಚ್ಚರಿ ಹೇಳಿಕೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *