ತಮ್ಮ ರಾಜಕೀಯ ಗುರುವಿನ ಆಶೀರ್ವಾದ ಪಡೆದ್ರು ಡಿಕೆಶಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿವಾಸಕ್ಕೆ ಸಚಿವ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಅವರ ಆಶೀರ್ವಾದ ಪಡೆದಿದ್ದಾರೆ.

ಇಂದು ಹೊಸ ವರ್ಷದ ಶುಭಾಶಯ ತಿಳಿಸಲು ಡಿಕೆಶಿ ಅವರು ಮಾಜಿ ಮುಖ್ಯಮಂತ್ರಿಗಳ ಮನೆಗೆ ಭೇಟಿ ನೀಡಿದ್ದಾರೆ. ಬಳಿಕ ತಮ್ಮ ರಾಜಕೀಯ ಗುರುವಿಗೆ ಹೂಗುಚ್ಚ ಕೊಟ್ಟು, ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಎಸ್.ಎಂ ಕೃಷ್ಣ ಅವರನ್ನು ಕಾಂಗ್ರೆಸ್‍ಗೆ ಆಹ್ವಾನಿಸುವಷ್ಟು ದೊಡ್ಡವನಲ್ಲ ನಾನು. ನಮ್ಮಿಬ್ಬರದ್ದು ವೈಯಕ್ತಿಕ ಸಂಬಂಧ ಅಂತ ಸ್ಪಷ್ಟಪಡಿಸಿದ್ರು.

ಸ್ಟೀಲ್ ಬ್ರಿಡ್ಜ್ ಪರ ಬ್ಯಾಟಿಂಗ್:
ಸ್ಟೀಲ್ ಬ್ರಿಡ್ಜ್ ಏರ್ ಪೋರ್ಟ್ ಗೆ ಸಂಪರ್ಕ ಕಲ್ಪಿಸುತ್ತದೆ. ಜನರಿಗೆ ಅನುಕೂಲವಾಗುವ ಯೋಜನೆ ಇದಾಗಿದೆ. ಜನರಿಗೆ ಸಮಯ ಮುಖ್ಯ. ಹೀಗಾಗಿ ಸಂಚಾರ ಸುಲಭ ಮಾಡುವುದು ನಮ್ಮ ಉದ್ದೇಶವಾಗಿದೆ ಅಂದ್ರು.

ವಿರೋಧ ಪಕ್ಷದವರ ವಿರೋಧ ನೋಡಿ ಕೆಲಸ ಮಾಡಕ್ಕಾಗುತ್ತಾ? ಮೊಸರಲ್ಲಿ ಕಲ್ಲು ಹುಡುಕುವವರ ಮಾತನ್ನ ಗಂಭೀರವಾಗಿ ತೆಗೆದುಕೊಳ್ಳಲು ಆಗುತ್ತಾ?. ಸುಳ್ಳು ಆರೋಪ ಮಾಡಲಾಗಿತ್ತು. ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡಿ ಹೆದರಿಸಿದರೆ ಆಗುತ್ತಾ? ತಪ್ಪಿದ್ರೆ ಹೇಳಲಿ. ಈ ಯೋಜನೆಯಿಂದ ಜನರಿಗೆ ಅನುಕೂಲವಾಗಲಿದೆ. ಅವರಿವರು ವಿರೋಧಿಸ್ತಾರೆ ಅಂತ ನಾವು ಸುಮ್ನೆ ಇರಲು ಸಾಧ್ಯವಿಲ್ಲ ಎಂದು ಸ್ಟೀಲ್ ಬ್ರಿಡ್ಜ್ ಪರ ಬ್ಯಾಟಿಂಗ್ ಮಾಡಿದ್ರು.

ಬಿಜೆಪಿಯವರು ಏನ್ ಮಾಡ್ತಿದ್ದಾರೆ ಅಂತ ನಮಗೆ ಗೊತ್ತಿಲ್ಲ ಅನ್ಕೊಂಡಿದ್ದಾರೆ. ನಮಗೆ ಎಲ್ಲ ಗೊತ್ತಾಗುತ್ತೆ. ಅವರು ದೆಹಲಿಯಲ್ಲಿ ಏನ್ ಮಾಡಿದ್ರು ಅಂತ ಸರ್ಕಾರಕ್ಕೆ ಗೊತ್ತಿದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *