ಪತ್ನಿಯ ವಿರುದ್ಧವೇ ದೂರು ನೀಡಿದ ಹುಬ್ಬಳ್ಳಿಯ ಖ್ಯಾತ ವೈದ್ಯ

ಹುಬ್ಬಳ್ಳಿ: ಕುಟುಂಬ ಕಲಹದಿಂದ ಬೇರ್ಪಟ್ಟಿರುವ ವೈದ್ಯ ದಂಪತಿಗಳ ಕಲಹ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಪತ್ನಿ ಜೀವ ಬೆದರಿಕೆ ಹಾಕಿರುವುದಾಗಿ ಖ್ಯಾತ ವೈದ್ಯರೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ.

ಹುಬ್ಬಳ್ಳಿಯ ಶಿರೂರ ಪಾರ್ಕ್ ಪ್ರದೇಶದಲ್ಲಿರುವ ಮನೆಗೆ ನುಗ್ಗಿ ತಮ್ಮ ಮೇಲೆ ಕೈಯಿಂದ ಹಾಗೂ ಛತ್ರಿಯಿಂದ ಹೊಡೆದು ಜೀವ ಬೆದರಿಕೆ ಹಾಕಿದ್ದಾರೆಂದು ಪತ್ನಿಯ ವಿರುದ್ಧ ಖ್ಯಾತ ವೈದ್ಯ ಕ್ರಾಂತಿಕಿರಣ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತಮ್ಮ ಮಕ್ಕಳ ಎದುರಿಗೆ ಪತ್ನಿ ಶೋಭಾ ಸುಣಗಾರ ಅಶ್ಲೀಲಪದಗಳನ್ನು ಬಳಸಿ ಮಾತನಾಡಿದ್ದಾರೆಂದು ದೂರಿನಲ್ಲಿ ಕ್ರಾಂತಿಕಿರಣ್ ಅವರು ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ:  ಗಡ್ಡ ಬೆಳೆಸಿ ಒಲಿಂಪಿಕ್ಸ್ ಗೆದ್ದು ಮೀಸೆ ತಿರುವಿದ ಶೂರರು

 

ಈಗಾಗಲೇ ಕ್ರಾಂತಿಕಿರಣ್ ಅವರ ಪತ್ನಿ ಶೋಭಾ ಸುಣಗಾರ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆಂಬುದನ್ನು ದೂರಿನಲ್ಲಿ ತಿಳಿಸಿದ್ದು, ಇನ್ನೂ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲು ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ವಿದ್ಯಾನಗರ ಠಾಣೆ ಪೊಲೀಸರು, ಶೋಭಾ ಸುಣಗಾರರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Comments

Leave a Reply

Your email address will not be published. Required fields are marked *