ರೋಗಿಗಳ ವೇಷದಲ್ಲಿ ಆಗಮಿಸಿ ಕೈ ಕಾಲು ಕಟ್ಟಿ, ಉಸಿರುಗಟ್ಟಿಸಿ ಖಾಸಗಿ ಡಾಕ್ಟರ್ ಕೊಲೆ

ಮಡಿಕೇರಿ: ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವೈದ್ಯರೊಬ್ಬರನ್ನು ಕೈ ಕಾಲು ಕಟ್ಟಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಗ್ರಾಮದಲ್ಲಿ ನಡೆದಿದೆ.

ದೀಲಿಪ್ ಕೊಲೆಯಾದ ವೈದ್ಯ. ಮೃತ ದೀಲಿಪ್ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದರು. ಶನಿವಾರ ತಡರಾತ್ರಿ ದುಷ್ಕರ್ಮಿಗಳು ವೈದ್ಯರ ಬೈಲುಕೊಪ್ಪ ಗ್ರಾಮದಲ್ಲಿರುವ ಮನೆಗೆ ರೋಗಿಗಳ ವೇಷದಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲಿ ನೆಲ ಹಾಗೂ ಗೋಡೆಯ ಮೇಲೆ ಖಾರದ ಪುಡಿ ಕಂಡು ಬಂದಿದೆ. ಅಲ್ಲದೇ ವೈದ್ಯರ ಎರಡೂ ಕೈಗಳನ್ನು ಹಿಂದಕ್ಕೆ ತಿರುಗಿಸಿ ದಾರದಿಂದ ಬಿಗಿದು ಕಟ್ಟಲಾಗಿದೆ. ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ಸ್ಥಳಕ್ಕೆ ಪಿರಿಯಾಪಟ್ಟಣ ವೃತ್ತ ನಿರೀಕ್ಷಕರು ಹಾಗೂ ಮೈಸೂರು ಎಸ್‍ಪಿ ಅಮಿತ್ ಸಿಂಗ್ ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *