ಮಗನಿಗೆ ಕಚ್ಚಿದ ನಾಯಿಯನ್ನು ಹೊಡೆದು ಕೊಂದ

ಭೋಪಾಲ್: ಮಗನಿಗೆ ಕಚ್ಚಿದ ನಾಯಿಯನ್ನು ವ್ಯಕ್ತಿಯೊಬ್ಬ ಸಿಟ್ಟಿನಿಂದ ಹೊಡೆದು ಕೊಂದು ಹಾಕಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಸಿಮರಿಯತಲ್ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ನಾಯಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೋ ಗಮನಕ್ಕೆ ಬಂದ ಕೂಡಲೇ ಪ್ರಾಣಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಡೆಹಟ್ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ಕುಮಾರ್ ತಿಳಿಸಿದ್ದಾರೆ. ವಿಡಿಯೊದಲ್ಲಿ ವ್ಯಕ್ತಿ ನಾಯಿಗೆ ಚೆನ್ನಾಗಿ ಹೊಡೆಯುತ್ತಿದ್ದು ನಾಯಿ ನೋವಿನಿಂದ ಕೂಗುತ್ತಿದೆ. ಹರಿತವಾದ ಆಯುಧದಿಂದ ವ್ಯಕ್ತಿ ನಾಯಿ ಮೇಲೆ ಹಲ್ಲೆ ಮಾಡಿದ್ದು ಅದರ ಕಾಲನ್ನು ಕತ್ತರಿಸಿದ್ದಾರೆ. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೇಟಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪೊಲೀಸ್ ಸೂಪರಿಂಟೆಂಡೆಂಟ್ ಅಮಿತ್ ಸಿಂಗ್, ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:   ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಗ್ರಾಮಸ್ಥರ ಪ್ರಕಾರ, ಆರೋಪಿ ಸಾಗರ್ ವಿಶ್ವಾಸ್, ನಾಯಿ ತನ್ನ ಮಗನ ಮೇಲೆ ದಾಳಿ ಮಾಡಿ ಗಾಯ ಮಾಡಿದ್ದಕ್ಕೆ ಸಿಟ್ಟಾಗಿದ್ದಾರೆ. ಗ್ರಾಮದ ಇತರ ಐದು ಮಂದಿಗೂ ನಾಯಿ ಕಚ್ಚಿದೆ, ಘಟನೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾದ ಆಧಾರದ ಮೇಲೆ ನ್ಯಾಯಾಲಯ ಮುಂದೆ ಹಾಜರಾಗಲು ನೊಟೀಸ್ ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *