ಮಟನ್ ಚೀಲ ಹೊತ್ತೊಯ್ದ ಬೀದಿ ನಾಯಿ ಹೊಡೆದು ಕೊಂದ

ಲಕ್ನೋ: ಮಟನ್ ಚೀಲ ಹೊತ್ತೊಯ್ದ ಬೀದಿ ನಾಯಿಯನ್ನು ಕೋಲಿನಿಂದ ಹೊಡೆದು ಕೊಂದು ಹಾಕಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.

ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್(40) ಬಂಧಿತ ಆರೋಪಿಯಾಗಿದ್ದಾನೆ. ಈತನ ಮನೆಗೆ ನುಗ್ಗಿದ್ದ ನಾಯಿ ಮೇಕೆ ಮಾಂಸದ ಚೀಲದೊಂದಿಗೆ ಪರಾರಿಯಾಗಿತ್ತು. ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾನೆ ಎಂದು  ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

ವಿಜಯ ನಗರ  ಪೊಲೀಸ್ ಠಾಣೆಯ ಪ್ರಭಾರಿ ತಹಜೀಬ್ ಖಾಜಿ ಮಾತನಾಡಿ, ಬೀದಿಯಲ್ಲಿ ತಿರುಗಾಡಿಕೊಂಡಿದ್ದ ನಾಯಿ ಭಾನುವಾರ ರಾತ್ರಿ ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್ ಮನೆಗೆ ನುಗ್ಗಿ ಕುರಿ ಮಾಂಸದ ಚೀಲವನ್ನು ಬಾಯಿಗೆ ತುರುಕಿಕೊಂಡು ಅಲ್ಲಿಂದ ಪರಾರಿಯಾಗಿತ್ತು. ಇದರಿಂದ ಆಕ್ರೋಶಗೊಂಡ ಜಗದೀಶ್ ಹಿಂಬಾಲಿಸಿಕೊಂಡು ಬಂದು ನಾಯಿ ಸಾಯುವವರೆಗೂ ಕೋಲಿನಿಂದ ನಿರ್ದಯವಾಗಿ ಥಳಿಸಿದ್ದಾನೆ ಎಂದು ಹೇಳಿದರು.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಚೌಹಾಣ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಎಸ್‍ಎಚ್‍ಒ ಹೇಳಿದರು. ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ಅವರ ದೂರಿನ ಮೇರೆಗೆ ದೂರು ದಾಖಲಿಸಲಾಗಿದೆ ಎಂದರು.

Comments

Leave a Reply

Your email address will not be published. Required fields are marked *