ಮಹಿಳಾ ಅಧಿಕಾರಿಗೆ ಅವಾಜ್ ಹಾಕಿದ ಸಚಿವ ಸಾ.ರಾ.ಮಹೇಶ್ – ತುಮಕೂರು ಎಸ್‍ಪಿ ಕಣ್ಣೀರು

ತುಮಕೂರು: ಮಂಗಳವಾರ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡು ಮುಖ್ಯಮಂತ್ರಿಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ನಡುವೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕರ್ತವ್ಯ ನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಅವರಿಗೆ ಅವಾಜ್ ಹಾಕಿರುವ ವಿಡಿಯೋ ವೈರಲ್ ಆಗಿದೆ.

ಶ್ರೀಗಳ ಕ್ರಿಯಾ ಸಮಾಧಿ ವಿಧಿವಿಧಾನ ವೀಕ್ಷಿಸಲು ವೀಕ್ಷಿಸಲು ಸಾ.ರಾ. ಮಹೇಶ್ ಗದ್ದುಗೆ ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಪ್ರವೇಶ ನಿರಾಕರಿಸಿದ್ದಕ್ಕೆ ಎಸ್‍ಪಿ ದಿವ್ಯಾ ಗೋಪಿನಾಥ್ ಮತ್ತು ಸಾ.ರಾ.ಮಹೇಶ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಸಚಿವರು ಗದರಿದ್ದರಿಂದ ಎಸ್‍ಪಿ ಕಣ್ಣೀರು ಹಾಕಿದ್ದಾರೆ.

ಈ ವಿಡಿಯೋ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ನಾನು ಮಂತ್ರಿ ಎಂದು ಹೇಳಿದ್ರೂ ನನ್ನನ್ನು ತಡೆದರು. ಕೆಲವು ಅಧಿಕಾರಿಗಳಿಗೆ ಮಂತ್ರಿಗಳು ಯಾರು ಎನ್ನುವುದೇ ಗೊತ್ತಿರಲಿಲ್ಲ. ಹಾಗಾಗಿ ನಾವೇ ನಮ್ಮನ್ನು ಅವರಿಗೆ ಪರಿಚಯಿಸಿಕೊಳ್ಳುತ್ತೇವೆ. ನನ್ನ ಹಿಂದೆ ಬಂದ ಸಚಿವ ವೆಂಕಟರಾವ್ ನಾಡಗೌಡರು ಬಂದಾಗ ಇದೇ ಎಸ್‍ಪಿ ತಡೆದಿದ್ದರು. ನಾಡಗೌಡ್ರು ನಾನು ಮಂತ್ರಿ ಇದ್ದೇನಮ್ಮಾ, ಒಳಗೆ ಹೋಗಲು ಬಿಡಿ. ಶ್ರೀಗಳ ದರ್ಶನ ಪಡೆದು ಹಿಂದಿರುಗುತ್ತೇನೆಂದು ಮನವಿ ಮಾಡಿಕೊಂಡಿದ್ದರು ಎಂದು ತಿಳಿಸಿದರು.

ಅದೊಂದು ಧಾರ್ಮಿಕ ಕೆಲಸವಾಗಿದ್ದರಿಂದ ನಾನು ಹೆಚ್ಚು ಮಾತನಾಡಲಿಲ್ಲ. ಈ ವೇಳೆ ನಾನು ಅವರಿಗೆ ಯಾವುದೇ ಕೆಟ್ಟ ಪದಗಳಿಂದಲೂ ನಿಂದಿಸಿಲ್ಲ. ದಾರಿ ಬಿಡಿ ಎಂಬುವುದನ್ನು ಎತ್ತರದ ಧ್ವನಿಯಲ್ಲಿ ಹೇಳಿದ್ದೇನೆ. ಯೂಸ್‍ಲೆಸ್ ತರಹ ಮಾತನಾಡಿ, ನ್ಯೂಸ್‍ಸೆನ್ಸ್ ಕ್ರಿಯೇಟ್ ಮಾಡಬೇಡಿ ಅಂತಾ ಹೇಳಿದ್ದೇನೆ. ಅಧಿಕಾರಿಗಳು ತಪ್ಪು ಮಾಡಿದಾಗ ಅವರಿಗೆ ಸಚಿವರು ಏನು ಹೇಳಬಾರದಾ? ಆ ಕ್ಷಣದಲ್ಲಿ ನಡೆದ ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಹೇಳಿದ್ದೇನೆ. ನನ್ನ ಹೇಳಿಕೆಗೆ ಯಾವುದೇ ಕ್ಷಮೆ ಕೇಳಲ್ಲ ಮತ್ತು ವಿಷಾದ ನನಗಿಲ್ಲ ಎಂದು ಸಾ.ರಾ.ಮಹೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *