ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

ಬಾರಿಯ 212 ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಕ್ಷಾಂತರ ಜನರು ಆಗಮಿಸುವ ಫಲಪುಷ್ಪ ಪ್ರದರ್ಶನದಲ್ಲಿ  ಕರ್ನಾಟಕ ರತ್ನ ಡಾ. ರಾಜಕುಮಾರ್  ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯ ಆಧಾರಿತ  ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 5ರಂದು ಫಲಪುಷ್ಪ  ಪ್ರದರ್ಶನವು  ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ  ರಾಘವೇಂದ್ರ ರಾಜಕುಮಾರ್ ಹಾಗೂ ನಟ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು  ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ  ಆಹ್ವಾನಿಸಲಾಗಿದೆ. ಇದನ್ನೂ ಓದಿ: `ಪುಷ್ಪ 2’ನಲ್ಲಿ ಅಲ್ಲು ಅರ್ಜುನ್‌ಗೆ ಟಕ್ಕರ್ ಕೊಡಲಿದ್ದಾರೆ ಈ ಬಾಲಿವುಡ್ ಸ್ಟಾರ್

ಈ ಸಂದರ್ಭದಲ್ಲಿ ಉದ್ಯಾನ  ಕಲಾಸಂಘದ  ಉಪಾಧ್ಯಕ್ಷರಾದ ಶ್ರೀ ವಾಸುದೇವ್. ತೋಟಗಾರಿಕೆ  ಜಂಟಿ ನಿರ್ದೇಶಕರಾದ  ಡಾ. ಎಂ ಜಗದೀಶ್ ಹಾಗೂ  ಲಾಲ್ ಬಾಗ್  ತೋಟಗಾರಿಕೆ ಉಪನಿರ್ದೇಶಕರಾದ  ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *