ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಬಿಡಿ – ಶಾಸಕ ಶಿವರಾಜ್ ಪಾಟೀಲ್

Dr. Shivaraj Patil

ರಾಯಚೂರು: ಜಿಲ್ಲೆಯನ್ನು ಕಡೆಗಣಿಸಲಾಗಿದೆ ಉತ್ತರ ಕರ್ನಾಟಕ ಎಂದರೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ. ಕಲ್ಯಾಣ ಕರ್ನಾಟಕ ಎಂದರೆ ಕಲಬುರಗಿ, ಬೀದರ್ ಎನ್ನುವಂತಾಗಿದೆ. ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಬಿಡಿ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಹೇಳಿದ್ದ ಮಾತು ಈಗ ಚರ್ಚೆಗೆ ಗ್ರಾಸವಾಗಿದೆ.

ಶಿವರಾಜ್ ಪಾಟೀಲ್ ಹೇಳಿಕೆಗೆ ತೆಲಂಗಾಣದ ಟಿಆರ್‍ಎಸ್ ಕಾರ್ಯಾಧ್ಯಕ್ಷ ಕೆಟಿಆರ್ ಸ್ವಾಗತಿಸಿದ್ದಾರೆ. ತೆಲಂಗಾಣದ ಅಭಿವೃದ್ಧಿಯನ್ನು ನೋಡಿ ಶಾಸಕ ಶಿವರಾಜ್ ಪಾಟೀಲ್ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಲು ಒತ್ತಾಯಿಸಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಬ್ಬರು ಬಿಜೆಪಿ ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ಕೊಡುತ್ತಿಲ್ಲ: ಸತೀಶ್ ಜಾರಕಿಹೊಳಿ

ತಮ್ಮ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವುದರಿಂದ ಸ್ಪಷ್ಟನೆ ನೀಡಿರುವ ಶಾಸಕ ಡಾ.ಶಿವರಾಜ್ ಪಾಟೀಲ್ ರಾಯಚೂರು ಜಿಲ್ಲೆಯನ್ನು ನಿರ್ಲಕ್ಷಿಸಲಾಗುತ್ತಿದೆ ಹೀಗಾಗಿ ಆ ಮಾತು ಹೇಳಿದ್ದೆ. ನಾನು ಹುಟ್ಟಿರುವುದು ಕರ್ನಾಟಕದಲ್ಲೇ ಸಾಯುವುದು ಕರ್ನಾಟಕದಲ್ಲೇ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ ಎಂದು ಆಕ್ರೋಶದಲ್ಲಿ ಹೇಳಿದ್ದೇ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಲು ಅವರಿಗೆ ಆಸೆ ಇರಬಹುದು ನಾವು ಬಿಟ್ಟುಕೊಡಲ್ಲ. ಜಿಲ್ಲೆ ಅಭಿವೃದ್ಧಿಯಾಗಿಲ್ಲ ಎನ್ನುವ ಸಿಟ್ಟಿನಲ್ಲಿ ಮಾತನಾಡಿದ್ದೇನೆ. ರಾಯಚೂರನ್ನು ಕಡೆಗಣಿಸುವುದು ಇನ್ನಾದರೂ ನಿಲ್ಲಬೇಕು ಎಂಬುವುದು ನನ್ನ ಉದ್ದೇಶ ಎಂದು ಸ್ಪಷ್ಟನೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *