ಕುಡಿದು ಬಂದು ತಾಯಿಯನ್ನೇ ಕೊಂದ ಮಗ

ಹಾಸನ: ಕುಡಿದು ಬಂದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿಯನ್ನೇ ಮಗ ಕೊಂದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಸಣ್ಣಮ್ಮ ಮೃತಳಾಗಿದ್ದಾಳೆ. ನಂಜೇಶ್ ಗೌಡ ತಾಯಿ ಕೊಂದ ಆರೋಪಿಯಾಗಿದ್ದಾನೆ. ಕುಡಿದು ಬಂದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಕೋಪಗೊಂಡು ತಾಯಿಯನ್ನೇ ಕೊಲೆ ಮಾಡಿದ್ದು, ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಸಂಕಲಾಪುರ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಹಿಜಬ್ ಧರಿಸಿ ನರ್ಸಿಂಗ್ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು – ಬ್ರೀಮ್ಸ್ ಮೆಡಿಕಲ್ ಕಾಲೇಜು ಅನುಮತಿ

ಕಂಠಪೂರ್ತಿ ಕುಡಿದು ಬಂದು ತಾಯಿ ಜೊತೆ ಜಗಳ ಮಾಡಿದ ಮಗ ನಂಜೇಶ್‍ಗೌಡನ ದುರ್ನಡತೆ ಬಗ್ಗೆ ತಾಯಿ ಸಣ್ಣಮ್ಮ ಪ್ರಶ್ನೆ ಮಾಡಿದ್ದಾರೆ. ಇದರಿಂದ ಕೋಪಗೊಂಡ ಮಗ ತಾಯಿಗೆ ದೊಣ್ಣೆಯಿಂದ ಹಲ್ಲೆಮಾಡಿ ಹತ್ಯೆ ಮಾಡಿದ್ದಾನೆ.

ತಾಯಿಯನ್ನು ಕೊಂದು ಬಳಿಕ ಪತ್ನಿಯ ಕ್ಯಾಂಟೀನ್ ಬಳಿ ಬಂದು ಆಕೆಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಸಾವು ಬದುಕಿನ ನಡುವೆ ಹೋರಾಡುತ್ತಿರೊ ಪತ್ನಿಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಧರ್ಮ ಮುಖ್ಯ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು

Comments

Leave a Reply

Your email address will not be published. Required fields are marked *