ಕುಡಿದ ಅಮಲಿನಲ್ಲಿ ತಮ್ಮನಿಂದಲೇ ಅಣ್ಣನ ಕೊಲೆ

ಮೈಸೂರು: ಕುಡಿದ ಅಮಲಿನಲ್ಲಿ ತಮ್ಮನಿಂದಲೇ ಅಣ್ಣನ ಕೊಲೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಆಂಜನೇಯ ಬ್ಲಾಕ್‍ನಲ್ಲಿ ನಡೆದಿದೆ.

ರವಿಚಂದ್ರ (35) ಕೊಲೆಯಾದ ವ್ಯಕ್ತಿಯಾಗಿದ್ದು, ವಿಜಯ ಕುಮಾರ್ ಸಹೋದರನನ್ನೇ ಕೊಲೆಗೈದ ಆರೋಪಿ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಹೋದರನ್ನು ಕೊಲೆ ಮಾಡಿದ್ದಾನೆ.

ಘಟನೆ ನಡೆದ ಕೂಡಲೇ ಗಲಾಟೆ ಆಗುತ್ತಿರುವ ಕುರಿತ ಎಚ್ಚೆತ್ತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಆರೋಪಿ ವಿಜಯ್ ಕುಮಾರ್‍ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಕೊಲೆ ಗಲಾಟೆ ನಡೆದಿದ್ದು, ಕೂಡಿದ ಅಮಲಿನಲ್ಲಿದ್ದ ಪರಿಣಾಮ ಆರೋಪಿ ಕೃತ್ಯ ಎಸಗಿದ್ದಾನೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದ್ದು, ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

Comments

Leave a Reply

Your email address will not be published. Required fields are marked *