ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಕ್ಷಮಿಸಿ: ವಿಜಯ್

ಬೆಂಗಳೂರು: ನಟ ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ಕತ್ತಿಯಲ್ಲಿ ಕೇಕ್ ಕಟ್ ಮಾಡುವ ಮೂಲಕ ಹೊಸ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ತಮ್ಮ ತಪ್ಪಿನ ಬಗ್ಗೆ ನಟ ವಿಜಯ್ ಒಪ್ಪಿಕೊಂಡಿದ್ದು, ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ದುನಿಯಾ ವಿಜಯ್, ಗುಂಪಿನಲ್ಲಿ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಈ ವೇಳೆ ನನ್ನ ಕೈಗೆ ಯಾರು ತಲ್ವಾರ್ ಕೊಟ್ರೋ ಗೊತ್ತಾಗಲಿಲ್ಲ. ಈ ವೇಳೆ ನನ್ನ ಗಮನಕ್ಕೆ ಬಾರದೇ ಎಡವಟ್ಟಾಗಿದೆ ಎಂದು ಕ್ಷಮೆ ಕೇಳಿದರು. ಇದನ್ನೂ ಓದಿ: ದುನಿಯಾ ವಿಜಿ 46ನೇ ಬರ್ತ್ ಡೇಯಲ್ಲಿ ಅವಾಂತರ- ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ನಟ

ಭಾನುವಾರ ರಾತ್ರಿ ಕೇಕ್ ಕಟ್ ಮಾಡಿರುವ ವಿಡಿಯೋವನ್ನು ಗಿರಿನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 5 ಇಂಚಿಗೂ ಉದ್ದದ ಕತ್ತಿ ಇದ್ದದ್ದು ಸಾಬೀತಾದರೆ ನಟ ದುನಿಯಾ ವಿಜಯ್ ಮೇಲೆ, ಆರ್ಮ್ಸ್ ಆ್ಯಕ್ಟ್ ಅಡಿ ಪೊಲೀಸರು ಕೇಸ್ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ.

ಇಂದು ದುನಿಯಾ ವಿಜಯ್ ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಕತ್ತಿಯಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿಕೊಂಡರು. ಈ ವೇಳೆ ತಮ್ಮ ‘ಸಲಗ’ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜ್ಯದ ಹಲವೆಡೆಯಿಂದ ಅಭಿಮಾನಿಗಳು ಬಂದಿದ್ದರು.

 

Comments

Leave a Reply

Your email address will not be published. Required fields are marked *