ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್‍ಗೆ ತಿರುವು: ಗಣಪತಿ ಸಹೋದರ, ತಂದೆ ಹೇಳಿದ್ದೇನು?

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿರುವ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಸಿಗುತ್ತೆ ಎಂಬ ಆಶಾಭಾವನೆ ಮೂಡಿದೆ ಎಂದು ಮೃತ ಗಣಪತಿ ಸಹೋದರ ಮಾಚಯ್ಯ ಮತ್ತು ಗಣಪತಿ ತಂದೆ ಕುಶಾಲಪ್ಪ ಹೇಳಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತನಾಡಿದ ಮಾಚಯ್ಯ, ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂದಿನಿಂದಲೇ ಸಾಕ್ಷ್ಯಧಾರಗಳನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದ್ದರು. ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಇದ್ದ ಪೆನ್‍ಡ್ರೈವ್, ದಾಖಲೆಗಳು, ಫೋನ್ ನಲ್ಲಿ ಇರುವ ಸಾಕ್ಷ್ಯಧಾರಗಳನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದ್ದರು. ಆದರೆ ಇದೀಗ ಸತ್ಯ ಹೊರಗೆ ಬರುತ್ತಿದೆ ಅಂತ ಹೇಳಿದ್ರು. ನಮಗೆ ನ್ಯಾಯ ಸಿಗುತ್ತದೆ. ಅಲ್ಲದೇ ಸಿಬಿಐ ತನಿಖೆಗೆ ಹೋಗಲಿದೆ ಎಂಬ ನಂಬಿಕೆ ನಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಗಣಪತಿ ತಂದೆ ಕುಶಾಲಪ್ಪ, ಪ್ರಕರಣ ಸಿಬಿಐಗೆ ವಹಿಸಿದ್ರೆ ಖಂಡಿತ ನಮಗೆ ನ್ಯಾಯ ಸಿಗುತ್ತೆ ಅಂತ ಹೇಳಿದ್ರು.

ಇದನ್ನೂ ಓದಿ:  ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್ 

https://youtu.be/AGmp1M_0q2s

https://youtu.be/p2V1xEclj3g

Comments

Leave a Reply

Your email address will not be published. Required fields are marked *