ಬೀದರ್‌ನಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ಬೀದರ್: ರಾಜ್ಯದ ಗಡಿ ಜಿಲ್ಲೆ ಬೀದರ್‌ನಲ್ಲಿ ಮತ್ತೆ ಎರಡು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಬೀದರ್ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ತಡರಾತ್ರಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸಿದ್ದಕ್ಕೆ ಮಂಗಲಗಿ ಗ್ರಾಮಸ್ಥರು ಆತಂಕಗೊಂಡು ಮನೆಯಿಂದ ಹೊರ ಬಂದಿದ್ದಾರೆ.

ಮತ್ತೊಂದೆಡೆ ತಾಲೂಕಿನ ಸಿರಕಟನಹಳ್ಳಿಯಲ್ಲೂ ಒಂದು ಬಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಭಯಗೊಂಡ ಗ್ರಾಮಸ್ಥರು ಮನೆಯಿಂದ ಹೊರಗಡೆ ಬಂದು ಜಾಗರಣೆ ಮಾಡಿದ್ದಾರೆ. ಇದನ್ನೂ ಓದಿ:  ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

ವಿಷಯ ತಿಳಿದು ತಡರಾತ್ರಿ ಸಿರಕಟನಹಳ್ಳಿ ಗ್ರಾಮಕ್ಕೆ ಶಾಸಕ ಬಂಡೆಪ್ಪ ಖಾಶೆಂಪೂರ್ ಭೇಟಿ ನೀಡಿ ಪರಿಶೀಲನೆ ಮಾಡಿ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ. ಪದೇ ಪದೇ ಭೂಮಿ ಕಂಪಿಸುತ್ತಿರುವುದಕ್ಕೆ ಹಾಗೂ ಭೂಮಿಯಿಂದ ಕೇಳಿ ಬರುತ್ತಿರುವ ನಿಗೂಢ ಶಬ್ದಕ್ಕೆ ಈ ಗ್ರಾಮಗಳ ಜನರು ಆತಂಕಗೊಂಡಿದ್ದಾರೆ. ಇದು ಭೂಕಂಪನವಲ್ಲ, ಮಳೆ ಜಾಸ್ತಿಯಾಗಿದ್ದರಿಂದ ಈ ರೀತಿಯಾಗುತ್ತಿದೆ ಎಂದು ಗ್ರಾಮಸ್ಥರಿಗೆ ಶಾಸಕರು ತಿಳಿಸಿದರು. ಇದನ್ನೂ ಓದಿ: ವಿದ್ಯುತ್‌ ನೀಡದಿದ್ದಕ್ಕೆ ಅಖಿಲೇಶ್‌ ಯಾದವ್‌ ಮೊದಲು ಕ್ಷಮೆಯಾಚಿಸಲಿ: ಯೋಗಿ ಆದಿತ್ಯನಾಥ್

Comments

Leave a Reply

Your email address will not be published. Required fields are marked *