ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭದ್ರತಾಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದೆ. ಅಲ್ಲದೇ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕುಪ್ವಾರದಲ್ಲೂ ಉಗ್ರರ ಉಪಟಳ ಮುಂದುವರಿದಿದ್ದು, ಮೂವರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಸುತ್ತುವರಿದಿದೆ.

ಹಂದ್ವಾರದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದರು. ಮುಂಜಾನೆ ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಯೂ ಕೂಡ ಪ್ರತ್ಯುತ್ತರವಾಗಿ ಅವರ ವಿರುದ್ಧ ಗುಂಡಿನ ಚಕಮಕಿ ನಡೆಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸದ್ಯಕ್ಕೆ ಭಯೋತ್ಪದಾಕರು ಗುಂಡಿನ ಚಕಮಕಿ ನಿಲ್ಲಿಸಿದ್ದು, ಮೂವರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಸುತ್ತುವರಿದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *